ADVERTISEMENT

ರೈತ ಚಳವಳಿ ಧೀಮಂತ ನಾಯಕನನ್ನು ಕಳೆದುಕೊಂಡಿದೆ: ಸಿಎಂ ಸಂತಾಪ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2018, 4:12 IST
Last Updated 19 ಫೆಬ್ರುವರಿ 2018, 4:12 IST
ರೈತ ಚಳವಳಿ ಧೀಮಂತ ನಾಯಕನನ್ನು ಕಳೆದುಕೊಂಡಿದೆ: ಸಿಎಂ ಸಂತಾಪ
ರೈತ ಚಳವಳಿ ಧೀಮಂತ ನಾಯಕನನ್ನು ಕಳೆದುಕೊಂಡಿದೆ: ಸಿಎಂ ಸಂತಾಪ   

ಬೆಂಗಳೂರು: ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ, ರೈತ ನಾಯಕ ಕೆ.ಎಸ್‌.ಪುಟ್ಟಣ್ಣಯ್ಯ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ವ್ಯಕ್ತಪಡಿಸಿದ್ದು, ರೈತ ಚಳವಳಿ ಒಬ್ಬ ಧೀಮಂತ ನಾಯಕನನ್ನು ಕಳೆದುಕೊಂಡಿದೆ ಎಂದು ಹೇಳಿದ್ದಾರೆ.

‘ಸರ್ವೋದಯ ಪಕ್ಷದ ಶಾಸಕರಾದ ಹಿರಿಯ ರೈತ ಹೋರಾಟಗಾರ ಕೆ.ಎಸ್.ಪುಟ್ಟಣ್ಣಯ್ಯ ಅವರ ಸಾವಿನ ಸುದ್ದಿ ದಿಗ್ಭ್ರಮೆ ಉಂಟು ಮಾಡಿದೆ. ರೈತ ಚಳವಳಿ ಒಬ್ಬ ಧೀಮಂತ ನಾಯಕನನ್ನು ಕಳೆದುಕೊಂಡಿದೆ.  ಬಹುಕಾಲದ ಸ್ನೇಹಿತನ ಅಗಲಿಕೆ ನನಗೆ ಅತೀವ ದುಃಖವನ್ನುಂಟು ಮಾಡಿದೆ. ಅವರ ಕುಟುಂಬಕ್ಕೆ ನನ್ನ ಸಾಂತ್ವನಗಳು’ ಎಂದು ಸಿಎಂ ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT