ADVERTISEMENT

ಧಾರವಾಡ: ಶಿವಾಜಿ ಜಯಂತಿಯಲ್ಲಿ ಮಾಲಾರ್ಪಣೆ ಬಳಿಕ ಗಾಳಿಯಲ್ಲಿ ಗುಂಡು ಹಾರಿಸಿದ ಪಾಲಿಕೆ ಸದಸ್ಯ ಮಂಜುನಾಥ ಕದಂ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2018, 9:00 IST
Last Updated 19 ಫೆಬ್ರುವರಿ 2018, 9:00 IST
ಧಾರವಾಡ: ಶಿವಾಜಿ ಜಯಂತಿಯಲ್ಲಿ ಮಾಲಾರ್ಪಣೆ ಬಳಿಕ ಗಾಳಿಯಲ್ಲಿ ಗುಂಡು ಹಾರಿಸಿದ ಪಾಲಿಕೆ ಸದಸ್ಯ ಮಂಜುನಾಥ ಕದಂ
ಧಾರವಾಡ: ಶಿವಾಜಿ ಜಯಂತಿಯಲ್ಲಿ ಮಾಲಾರ್ಪಣೆ ಬಳಿಕ ಗಾಳಿಯಲ್ಲಿ ಗುಂಡು ಹಾರಿಸಿದ ಪಾಲಿಕೆ ಸದಸ್ಯ ಮಂಜುನಾಥ ಕದಂ   

ಧಾರವಾಡ: ಶಿವಾಜಿ ಜಯಂತಿ ಅಂಗವಾಗಿ ಸೋಮವಾರ ಶಿವಾಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಕಾಂಗ್ರೆಸ್ ನಾಮ ನಿರ್ದೇಶಿತ ಪಾಲಿಕೆ ಸದಸ್ಯ ಮಂಜುನಾಥ ಕದಂ ಅವರು ಗಾಳಿಯಲ್ಲಿ ಎರಡು ಸುತ್ತು ಗುಂಡು ಹಾರಿಸಿದರು.

ಇಲ್ಲಿನ ಶಿವಾಜಿ ವೃತ್ತದಲ್ಲಿರುವ ಪ್ರತಿಮೆಗೆ ಬೃಹತ್ ಮಾಲೆ ಅರ್ಪಿಸಿದ ನಂತರ ಹಿಂದೆ ಇದ್ದ ಸಹಾಯಕರೊಬ್ಬರು ಪಿಸ್ತೂಲು ನೀಡಿದರು. ಕದಂ ಗಾಳಿಯಲ್ಲಿ ಎರಡು ಸುತ್ತು ಗುಂಡು ಹಾರಿಸಿದರು. ಶಿವಾಜಿ ಮಹಾರಾಜ್ ಕಿ ಜೈ ಎಂಬ ಜಯಘೋಷ ಮೊಳಗಿತು.

ಶರಹರ ಠಾಣಾ ವ್ಯಾಪ್ತಿಯಲ್ಲಿ ಇದು ನಡೆದಿದ್ದು, ಈವರೆಗೂ ಯಾವುದೇ ಪ್ರಕರಣ ದಾಖಲಾಗಿಲ್ಲ.

ADVERTISEMENT

</p></p>

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.