ADVERTISEMENT

ಮೈದೊಳಲು: ಶಂಕಿತ ಕಾಲರಾಗೆ ಮತ್ತೊಬ್ಬ ಬಲಿ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2018, 19:30 IST
Last Updated 19 ಫೆಬ್ರುವರಿ 2018, 19:30 IST
ಮೈದೊಳಲು: ಶಂಕಿತ ಕಾಲರಾಗೆ ಮತ್ತೊಬ್ಬ ಬಲಿ
ಮೈದೊಳಲು: ಶಂಕಿತ ಕಾಲರಾಗೆ ಮತ್ತೊಬ್ಬ ಬಲಿ   

ಹೊಳೆಹೊನ್ನೂರು: ಭದ್ರಾವತಿ ತಾಲ್ಲೂಕು ಮೈದೊಳಲಿನಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗಿದ್ದ ಎಸ್. ಕರಿಯಪ್ಪ ಪಾಟೀಲ್ (45) ಸೋಮವಾರ ಮೃತಪಟ್ಟರು. ಶಂಕಿತ ಕಾಲರಾದಿಂದ ಮೃತಪಟ್ಟ ಆರನೆಯವರು ಇವರು. ಶಿವಮೊಗ್ಗದ ಆಸ್ಪತ್ರೆಗಳಲ್ಲಿ ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ.

ಫೆ.9ರಂದು ಪಾಟೀಲ್‌ ಅವರಿಗೆ ವಾಂತಿ–ಭೇದಿ ಕಾಣಿಸಿಕೊಂಡಿತ್ತು. ಮೈದೊಳಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ತಾಲ್ಲೂಕು ಪಂಚಾಯ್ತಿಯ ಮಾಜಿ ಸದಸ್ಯರಾಗಿದ್ದ ಮೃತರಿಗೆ ಪತ್ನಿ, ಮೂವರು ಪುತ್ರರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT