ADVERTISEMENT

ಸಹಪಾಠಿಯಿಂದಲೇ ವಿದ್ಯಾರ್ಥಿನಿಯ ಕೊಲೆ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2018, 12:02 IST
Last Updated 20 ಫೆಬ್ರುವರಿ 2018, 12:02 IST
ಅಕ್ಷತಾ
ಅಕ್ಷತಾ   

ಮಂಗಳೂರು: ದಕ್ಷಿಣ ಕನ್ನಡ‌ ಜಿಲ್ಲೆಯ ಸುಳ್ಯದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳನ್ನು ಆಕೆಯ ಸಹಪಾಠಿಯೇ ಚೂರಿಯಿಂದ ಇರಿದು ಕೊಲೆ ಮಾಡಿದ್ದಾನೆ.

ಅಕ್ಷತಾ ಮೃತ ವಿದ್ಯಾರ್ಥಿನಿ. ಕಾರ್ತಿಕ್ ಕೊಲೆ‌ ಮಾಡಿದ ಆರೋಪಿ. ಮಂಗಳವಾರ ಮಧ್ಯಾಹ್ನ ಕಾಲೇಜು ಮುಗಿಸಿ ವಾಪಸು ಹೋಗುವಾಗ ಕೊಲೆ ಮಾಡಿದ್ದಾನೆ. 

(ಕಾರ್ತಿಕ್‌)

ADVERTISEMENT

ಅಕ್ಷತಾ ಕುತ್ತಿಗೆಗೆ ಆಕೆಯ ಸಹಪಾಠಿ ಕಾರ್ತಿಕ್ ಚೂರಿಯಿಂದ ಇರಿದಿದ್ದಾನೆ. ಆಕೆ ಮೃತಪಟ್ಟಿದ್ದಾಳೆ. ಬಳಿಕ ತನ್ನ ಕೈ ಮಣಿಕಟ್ಟನ್ನು ಚೂರಿಯಿಂದ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮೃತ ವಿದ್ಯಾರ್ಥಿನಿ ಬಿಎಸ್ಸಿ ಪದವಿ ಓದುತ್ತಿದ್ದರು. 

ಆರೋಪಿಯು ಅಕ್ಷತಾ ಕುತ್ತಿಗೆಗೆ ಆರು ಬಾರಿ ಚೂರಿಯಿಂದ ಇರಿದಿದ್ದಾನೆ. ಇಬ್ಬರೂ ಸುಳ್ಯದ ನೆಹರೂ ಸ್ಮಾರಕ ಕಾಲೇಜಿನ ವಿದ್ಯಾರ್ಥಿನಿಗಳು. 

ಆರೋಪಿಯನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರೇಮ ವೈಫಲ್ಯವೇ ಘಟನೆಗೆ ಕಾರಣವಾಗಿರಬಹುದು ಎಂಬುದು ಮೇಲ್ನೋಟಕ್ಕೆ ಕಾಣಿಸುತ್ತಿದೆ ಎಂದು ದಕ್ಷಿಣ ಕನ್ನಡ ಎಸ್‌ಪಿ ಡಾ.ಬಿ.ಆರ್.ರವಿಕಾಂತೇಗೌಡ ತಿಳಿಸಿದ್ದಾರೆ.

ಅಕ್ಷತಾ ಕೇರಳದ ಗಡಿ ಭಾಗದವರು. ಕಾರ್ತಿಕ್ ಸುಳ್ಯ ತಾಲ್ಲೂಕಿನ ನಾರ್ನಕಜೆ ನಿವಾಸಿ. ಪ್ರೇಮ ನಿವೇದನೆ ಮಾಡಿಕೊಂಡಾಗ ಒಪ್ಪಲಿಲ್ಲ ಎಂಬ ಕಾರಣಕ್ಕೆ ಕೃತ್ಯ ಎಸಗಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.