ADVERTISEMENT

ಬಾಣಾವರ ಮೀಸಲು ಅರಣ್ಯದಲ್ಲಿ ಕಾಳ್ಗಿಚ್ಚು

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2018, 19:30 IST
Last Updated 22 ಫೆಬ್ರುವರಿ 2018, 19:30 IST
ಕುಶಾಲನಗರ ಸಮೀಪದ ಬಾಣಾವರ ಮೀಸಲು ಅರಣ್ಯ ಪ್ರದೇಶದ ತೇಗದ ತೋಪಿನಲ್ಲಿ ಗುರುವಾರ ಕಾಣಿಸಿಕೊಂಡ ಬೆಂಕಿ
ಕುಶಾಲನಗರ ಸಮೀಪದ ಬಾಣಾವರ ಮೀಸಲು ಅರಣ್ಯ ಪ್ರದೇಶದ ತೇಗದ ತೋಪಿನಲ್ಲಿ ಗುರುವಾರ ಕಾಣಿಸಿಕೊಂಡ ಬೆಂಕಿ   

ಕುಶಾಲನಗರ (ಕೊಡಗು ಜಿಲ್ಲೆ): ಬಾಣಾವರ ಮೀಸಲು ಅರಣ್ಯ ಪ್ರದೇಶದ ತೇಗದ ತೋಪಿನಲ್ಲಿ ಗುರುವಾರ ಕಾಳ್ಗಿಚ್ಚು ಕಾಣಿಸಿಕೊಂಡು 25 ಎಕರೆಗಳಷ್ಟು ಅರಣ್ಯ ಭಸ್ಮವಾಗಿದೆ.

ಆಲದಮರ ಗ್ರಾಮದ ಬಳಿಯ ಅರಣ್ಯ ಪ್ರದೇಶದಲ್ಲಿ ಮಧ್ಯಾಹ್ನ ಕಾಣಿಸಿಕೊಂಡ ಬೆಂಕಿ ಸಂಜೆ ವೇಳೆಗೆ ಗಾಳಿ ರಭಸಕ್ಕೆ ಇಡೀ ಅರಣ್ಯವನ್ನೇ ವ್ಯಾಪಿಸಿದೆ.

ಒಣಗಿದ್ದ ಗಿಡಗಂಟಿಗಳು ಹಾಗೂ ಅಮೂಲ್ಯ ಮರಗಳು ಬೆಂಕಿಗೆ ಆಹುತಿಯಾಗಿವೆ. ತಕ್ಷಣವೇ ಅರಣ್ಯ ಸಿಬ್ಬಂದಿ ಬೆಂಕಿ ನಂದಿಸುವ ಯತ್ನ ಮಾಡಿದರೂ ಅದು ಸಾಧ್ಯವಾಗಿಲ್ಲ. ಕುಶಾಲನಗರ ಮತ್ತು ಸೋಮವಾರಪೇಟೆ ಅಗ್ನಿಶಾಮಕ ಸಿಬ್ಬಂದಿ, ಹೆಚ್ಚುವರಿ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಬಂದು ರಾತ್ರಿಯ ವೇಳೆಗೆ ಬೆಂಕಿ ಹತೋಟಿಗೆ ತರುವಲ್ಲಿ ಯಶಸ್ವಿಯಾದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.