ಬೆಂಗಳೂರು: ‘75ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಅಖಿಲ ಭಾರತೀಯ ಸಾಹಿತ್ಯ ಪರಿಷತ್ (ಅಭಾಸಾಪ) ವತಿಯಿಂದ ರಾಜ್ಯದಾದ್ಯಂತ ‘ನುಡಿ ಸ್ವರಾಜ್ಯ -75’ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಇದೇ 20ರವರೆಗೆ ನಡೆಯಲಿರುವಈ ಅಭಿಯಾನವನ್ನು ಪರಿಷತ್ನಎಲ್ಲ ತಾಲ್ಲೂಕು ಮತ್ತು ಜಿಲ್ಲಾ ಸಮಿತಿಗಳು ಮುನ್ನಡೆಸಲಿವೆ’ ಎಂದು ಅಭಾಸಾಪದ ರಾಜ್ಯ ಪ್ರಧಾನ ಕಾರ್ಯದರ್ಶಿ ರಘುನಂದನ ಭಟ್ ತಿಳಿಸಿದ್ದಾರೆ.
ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಕುಟುಂಬದವರನ್ನು ಗುರುತಿಸಿ, ಅವರ ಮನೆಗೆ ಭೇಟಿ ಕೊಟ್ಟು ಅವರು ಮಾಡಿದ ಸೇವೆಯನ್ನು ಸ್ಮರಿಸುವುದು ಅಭಿಯಾನದ ಉದ್ದೇಶ. ಅಲ್ಲದೆ, ತಾಲ್ಲೂಕು, ಜಿಲ್ಲೆಯ ಮೂವರು ಸಾಹಿತಿಗಳು 'ನಮ್ಮ ಜಿಲ್ಲೆ/ ತಾಲ್ಲೂಕಿನ ಸ್ವಾತಂತ್ರ್ಯ ಕಲಿಗಳು' ಎನ್ನುವ ವಿಷಯದ ಮೇಲೆ ಕಾರ್ಯಕ್ರಮದಲ್ಲಿ ಪ್ರಬಂಧ ಮಂಡಿಸಲಿದ್ದಾರೆ.
‘ಸಾಹಿತಿಗಳು, ಸ್ವಾತಂತ್ರ್ಯ ಕಲಿಗಳು ಹಾಗೂ ಸಾರ್ವಜನಿಕರು ಹೀಗೆ ಎಲ್ಲರ ಭಾಗವಹಿಸುವಿಕೆಯೊಂದಿಗೆ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸ್ಮರಣೀಯವಾಗಿಸಲು ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ’ ಎಂದೂ
ಅವರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.