ನಿತಿನ್ ಗಡ್ಕರಿ
–ಪಿಟಿಐ ಚಿತ್ರ
ನವದೆಹಲಿ: ಕರ್ನಾಟಕದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ 2025–26ನೇ ಸಾಲಿನಲ್ಲಿ ₹880 ಕೋಟಿ ಹಂಚಿಕೆ ಮಾಡಿ ಕೇಂದ್ರ ಭೂಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯ ಆದೇಶ ಹೊರಡಿಸಿದೆ.
ಈ ಮೊತ್ತವನ್ನು ಮಂಜೂರಾದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಮಾತ್ರ ಬಳಸಬೇಕು. ಯಾವುದೇ ಹೆದ್ದಾರಿ ಯೋಜನೆಗೆ ಮಂಜೂರಾದ ಮೊತ್ತಕ್ಕಿಂತ ಹೆಚ್ಚುವರಿ ಹಣ ಬಳಕೆ ಮಾಡುವಂತಿಲ್ಲ ಎಂದು ಸಚಿವಾಲಯ ಷರತ್ತು ವಿಧಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.