ಮೈಸೂರು: ಜಿಲ್ಲೆಯ ನಂಜನಗೂಡು ತಾಲ್ಲೂಕಿನಲ್ಲಿ ಭಾನುವಾರ ಕಟ್ಟೆಚ್ಚರ ವಹಿಸಲಾಗಿದೆ.
ರಸ್ತೆಯಲ್ಲಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಪಟ್ಟಣ ಸಂಪರ್ಕಿಸುವ ರಸ್ತೆಗಳಲ್ಲಿ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.
ಒಂದೇ ದಿನ 5 ಕೊರೊನಾ ಸೋಂಕು ಪತ್ತೆಯಾದ್ದರಿಂದ ಹಾಗೂ 950 ಮಂದಿಯನ್ನು ಮನೆಯಲ್ಲಿಯೆ ನಿಗಾ ವಹಿಸಲು ಹೇಳಿರುವುದರಿಂದ ಇಡೀ ಪಟ್ಟಣ ಸ್ತಬ್ದಗೊಂಡಿದೆ. ಅಗತ್ಯ ಸಾಮಗ್ರಿ ಖರೀದಿಸಲು ಜನರು ಹಿಂದೇಟು ಹಾಕುತ್ತಿದ್ದಾರೆ. ಗಾಳಿಸುದ್ದಿಗಳು ವ್ಯಾಪಕವಾಗಿ ಹಬ್ಬುತ್ತಿವೆ. ಸೋಂಕಿತರು ಪತ್ತೆಯಾದ ಕಾರ್ಖಾನೆಯ ಮೂವರು ಕಾರ್ಮಿಕರಲ್ಲಿ ಜ್ವರ ಕಂಡು ಬಂದಿದ್ದು ಅವರನ್ನು ರಾತ್ರೋ ರಾತ್ರಿ ಮೈಸೂರಿಗೆ ಕರೆದುಕೊಂಡು ಹೋಗಲಾಗಿದೆ ಎಂಬ ಸುದ್ದಿ ಹರಡಿ ಜನರು ಇನ್ನಷ್ಟು ತಳಮಳಗೊಂಡಿದ್ದಾರೆ. ಕೆಲವೆಡೆ ಹಾಲಿನ ಅಂಗಡಿಗಳನ್ನು ತೆರೆಯಲೂ ವರ್ತಕರು ಹಿಂದೇಟು ಹಾಕಿದ್ದಾರೆ. ತಹಶೀಲ್ದಾರ್ ಅವರು ಸಭೆ ಕರೆದಿದ್ದು,ಇನ್ನಷ್ಟು ಬಿಗಿಕ್ರಮಗಳನ್ನು ಜಾರಿಗೊಳಿಸುವ ನಿರೀಕ್ಷೆ ಇದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.