ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದಲ್ಲಿ 9 ಮತ್ತು 10ನೇ ತರಗತಿಗಳಿಗೆ ಶಾಲೆ ಆರಂಭಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಗಂಭೀರ ಚಿಂತನೆ ನಡೆಸಿದೆ.
ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆ ನಡೆಸಿದ ಸಭೆಯಲ್ಲಿ ಈ ಅಭಿಪ್ರಾಯ ವ್ಯಕ್ತವಾಗಿದ್ದು, ಶಾಲೆಗಳನ್ನು ಆರಂಭಿಸುವ ಕುರಿತು ಸರ್ಕಾರಕ್ಕೆ ಸಲ್ಲಿಸಲಿರುವ ವರದಿಯಲ್ಲಿ ಇಲಾಖೆಯ ಆಯುಕ್ತ ಅನ್ಬುಕುಮಾರ್ ಈ ವಿಷಯವನ್ನು ಪ್ರಸ್ತಾವಿಸುವ ಸಾಧ್ಯತೆ ಇದೆ.
9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು 14–15 ವಯೋಮಾನದವರಾಗಿದ್ದು, ಮಾಸ್ಕ್ ಧರಿಸುವುದು, ಅಂತರ ಕಾಪಾಡುವುದು, ಸಾನಿಟೈಸರ್ ಬಳಕೆಯ ಬಗ್ಗೆ ಅರಿವು ಮೂಡಿಸಬಹುದು. ಅಲ್ಲದೆ, ಪರ್ಯಾಯ ದಿನಗಳಲ್ಲಿ ಶಾಲೆ ನಡೆಸಬಹುದು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಆ ಅಂಶಗಳನ್ನು ವರದಿಯಲ್ಲಿ ಅನ್ಬುಕುಮಾರ್ ಉಲ್ಲೇಖಿಸಲಿದ್ದಾರೆ.
ಶಿಕ್ಷಕರ ವರ್ಗಾವಣೆ 18ರಿಂದ
ಶಿಕ್ಷಕರ ವರ್ಗಾವಣೆ ವೇಳಾಪಟ್ಟಿಗೆ ಸಂಬಂಧಿಸಿದ ಕಡತಕ್ಕೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಅನುಮೋದನೆ ನೀಡಿದ್ದಾರೆ. ನ. 18ರಿಂದ ಪ್ರಕ್ರಿಯೆಗಳು ಆರಂಭವಾಗಲಿದೆ. 2–3 ದಿನಗಳಲ್ಲಿ ಈ ಕುರಿತು ಸುತ್ತೋಲೆ ಪ್ರಕಟವಾಗಲಿದೆ ಎಂದೂ ಇಲಾಖೆಯ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.