ದೇಶದ ನೂತನ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು, ಜುಲೈ 25ರಂದು ಅಧಿಕಾರ ಸ್ವೀಕರಿಸಲಿದ್ದಾರೆ. ಈ ಸಂದರ್ಭದಲ್ಲಿ ಹೊನ್ನಾವರದ ಮಾಳ್ಕೋಡ ಗ್ರಾಮದ ಯುವತಿ ಚಿಂತನಾ ಹೆಗಡೆ, ಯಕ್ಷಗಾನ ಭಾಗವತಿಕೆಯ ಮೂಲಕ ಸ್ವಾಗತ ಕೋರಿದ್ದಾರೆ. ‘ಹೆಜ್ಜೆ ಇಟ್ಟಿಹಳು ದ್ರೌಪದಿ... ರಾಷ್ಟ್ರಪತಿಯ ಭವನದಲಿ..’ ಎಂದು ಯಕ್ಷಗಾನದ ಬಡಗುತಿಟ್ಟಿನ ಶೈಲಿಯಲ್ಲಿ ಗಾಯನ ಮಾಡಿದ್ದಾರೆ. ಉಡುಪಿಯ ಅರವಿಂದ ಚಿಪ್ಳೂಣ್ಕರ್ ಹಾಡನ್ನು ರಚಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.