ADVERTISEMENT

‘ಪ್ರಜಾವಾಣಿ’ ವರದಿ ಪರಿಣಾಮ: ಗೋಶಾಲೆಗಳಿಗೆ ₹ 24 ಲಕ್ಷ ಅನುದಾನ ಮಂಜೂರು

​ಪ್ರಜಾವಾಣಿ ವಾರ್ತೆ
Published 5 ಮೇ 2020, 19:23 IST
Last Updated 5 ಮೇ 2020, 19:23 IST

ಮಂಗಳೂರು: ಲಾಕ್‌ಡೌನ್‌ನಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿದ್ದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಗೋಶಾಲೆಗಳಿಗೆ ಸರ್ಕಾರ ₹ 24 ಲಕ್ಷ ಅನುದಾನ ಬಿಡುಗಡೆ ಮಾಡಿದೆ.

ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಸಾಮಾನ್ಯ ಸಂಗ್ರಹಣಾ ನಿಧಿಯಿಂದ ಬಿಡುಗಡೆ ಮಾಡಲಾಗಿದೆಇಲಾಖೆ ಆಯುಕ್ತರು ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರು ಹಾಗೂ ಉಡುಪಿ ಜಿಲ್ಲೆಯ ಎರಡು ಗೋಶಾಲೆಗಳಿಗೆ ಅನುದಾನ ಬಿಡುಗಡೆ ಮಾಡಲಾಗಿದೆ. ಇದನ್ನು ಜಾನುವಾರುಗಳಿಗೆ ಮೇವು ಹಾಗೂ ಇನ್ನಿತರೆ ಆರೈಕೆಗೆ ಬಳಕೆ ಮಾಡಬೇಕು ಎಂದು ಆದೇಶದಲ್ಲಿ ಅವರು ತಿಳಿಸಿದ್ದಾರೆ.

ADVERTISEMENT

‘ಗೋಶಾಲೆಗಳಿಗೂ ತಟ್ಟಿದ ಬಿಸಿ’ ಶೀರ್ಷಿಕೆಯಲ್ಲಿ ಮಂಗಳವಾರ ‘ಪ್ರಜಾವಾಣಿ’ ಪತ್ರಿಕೆಯಲ್ಲಿ ಈ ಕುರಿತ ವರದಿ ಪ್ರಕಟವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.