ADVERTISEMENT

ಪ್ರವಾಹದಿಂದ ಹಾನಿ: ಇಂದು ಕೇಂದ್ರ ಅಧ್ಯಯನ ತಂಡ ರಾಜ್ಯಕ್ಕೆ -ಸಚಿವ ಅಶೋಕ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2021, 22:50 IST
Last Updated 3 ಸೆಪ್ಟೆಂಬರ್ 2021, 22:50 IST
ಆರ್‌. ಅಶೋಕ
ಆರ್‌. ಅಶೋಕ    

ಬೆಂಗಳೂರು: ಮಳೆ ಮತ್ತು ಪ್ರವಾಹದಿಂದ ಆಗಿರುವ ಹಾನಿ ಕುರಿತು ಅಧ್ಯಯನ ನಡೆಸಲು ಕೇಂದ್ರದ ಅಧಿಕಾರಿಗಳ ತಂಡ ಶನಿವಾರ ಬೆಂಗಳೂರಿಗೆ ಬರಲಿದೆ. ಮಂಗಳವಾರದವರೆಗೂ ಈ ತಂಡ ವಿವಿಧೆ ಪ್ರವಾಸ ಮಾಡಿ, ಅಧ್ಯಯನ ನಡೆಸಲಿದೆ ಎಂದು ಕಂದಾಯ ಸಚಿವ ಆರ್‌. ಅಶೋಕ ತಿಳಿಸಿದರು.

ಅತಿವೃಷ್ಟಿ ಹಾಗೂ ಪ್ರವಾಹದಿಂದ ₹ 5,690 ಕೋಟಿ ನಷ್ಟವಾಗಿದೆ ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಕೇಂದ್ರೀಯ ವಿಪತ್ತು ಪರಿಹಾರ ನಿಧಿಯಿಂದ ರಾಜ್ಯಕ್ಕೆ ₹ 765 ಕೋಟಿ ಪರಿಹಾರ ದೊರೆಯಬೇಕಿದೆ. ಅಧಿಕಾರಿಗಳ ತಂಡ ವರದಿ ಸಲ್ಲಿಸಿದ ಬಳಿಕ ಈ ಮೊತ್ತ ಬಿಡುಗಡೆಯಾಗಲಿದೆ ಎಂದರು.

ಭೂಮಾಪಕರ ನೇಮಕ: ರಾಜ್ಯದಲ್ಲಿ ಭೂಮಾಪನಕ್ಕೆ ಸಂಬಂಧಿಸಿದ ಎರಡು ಲಕ್ಷ ಕಡತಗಳು ಬಾಕಿ ಇವೆ. ಅವುಗಳ ತ್ವರಿತ ವಿಲೇವಾರಿಗಾಗಿ 820 ಭೂಮಾಪಕರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ. ಡಿಸೆಂಬರ್‌ ಅಂತ್ಯದೊಳಗೆ ಇನ್ನೂ 600 ಭೂಮಾಪಕರನ್ನು ನೇಮಕ ಮಾಡಲಾಗುವುದು ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.