ADVERTISEMENT

ಸುರತ್ಕಲ್‌: ಬಟ್ಟೆ ಅಂಗಡಿಗೆ ನುಗ್ಗಿ ಮಹಮ್ಮದ್ ಫಾಝಿಲ್ ಎಂಬ ಯುವಕನ ಬರ್ಬರ ಹತ್ಯೆ

​ಪ್ರಜಾವಾಣಿ ವಾರ್ತೆ
Published 29 ಜುಲೈ 2022, 9:29 IST
Last Updated 29 ಜುಲೈ 2022, 9:29 IST
ಮಹಮ್ಮದ್ ಫಾಝಿಲ್‌
ಮಹಮ್ಮದ್ ಫಾಝಿಲ್‌   

ಮಂಗಳೂರು: ಕಾರ್‌ನಲ್ಲಿ ಬಂದಿದ್ದ ನಾಲ್ವರು ಮುಸುಕುದಾರಿ ದುಷ್ಕರ್ಮಿಗಳು ಬಟ್ಟೆ ಅಂಗಡಿಗೆ ನುಗ್ಗಿ ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಲೆ ಮಾಡಿ ಪರರಾರಿಯಾಗಿರುವ ಘಟನೆಮಂಗಳೂರು ಬಳಿಯಸುರತ್ಕಲ್‌ನಲ್ಲಿ ಗುರುವಾರ ಸಂಜೆ ನಡೆದಿದೆ.

ಕೊಲೆಯಾದ ಯುವಕನನ್ನು ಸುರತ್ಕಲ್‌ನ ಮಂಗಳಪೇಟೆಯ ಮಹಮ್ಮದ್ ಫಾಝಿಲ್‌ (23) ಎಂದು ಗುರುತಿಸಲಾಗಿದೆ. ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿದ್ದ ಫಾಝಿಲ್‌ ಆಸ್ಪತ್ರೆಯಲ್ಲಿ ಕೊನೆಯುಸಿರೆಳದಿದ್ದಾನೆ.

ಸುರತ್ಕಲ್ ಕಾಟಿಪಳ್ಳ ಮಂಗಳಪೇಟೆ ನಿವಾಸಿ ಮಹಮ್ಮದ್ ಫಾಝಿಲ್ ಅವರು, ರಾತ್ರಿ 8 ಗಂಟೆಯ ಸುಮಾರಿಗೆ ಎಂಆರ್‌ಪಿಎಲ್‌ ರಸ್ತೆಯ ಸುರತ್ಕಲ್ ಮಾರುಕಟ್ಟೆ ಸನಿಹದ ಸಂಕೀರ್ಣದಲ್ಲಿರುವ ಬಟ್ಟೆ ಅಂಗಡಿಗೆ ಹೋಗುತ್ತಿರುವ ಸಂದರ್ಭದಲ್ಲಿ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದೆ.

ADVERTISEMENT

ಸುಳ್ಯದ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಮಹಮ್ಮದ್‌ ಅವರ ಕೊಲೆ ನಡೆದಿದೆ’ ಎಂದು ಮಾಜಿ ಶಾಸಕ ಮೊಹಿಯುದ್ದೀನ್ ಬಾವ ಆರೋಪಿಸಿದ್ದಾರೆ.

ಈ ದೃಶ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಫಾಝಿಲ್‌ ಎಂಆರ್‌ಪಿಎಲ್‌ನಲ್ಲಿ ಗುತ್ತಿಗೆ ಕಾಮಗಾರಿ ನಿರ್ವಹಿಸುತ್ತಿದ್ದರು.

ಮಂಗಳವಾರ ರಾತ್ರಿ ಹತ್ಯೆಯಾಗಿದ್ದ ಪ್ರವೀಣ್‌ ಅವರ ಕುಟುಂಬದವರಿಗೆ ಸಾಂತ್ವನ ಹೇಳಲು ಮುಖ್ಯಮಂತ್ರಿ ಮಂಗಳೂರಿನಲ್ಲಿ ಇದ್ದ ವೇಳೆಯೇ ಈ ಹತ್ಯೆ ನಡೆದಿದೆ. ಸುರತ್ಕಲ್ ಸುತ್ತಮುತ್ತ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.