ಬಾಗಲಕೋಟೆ: ಜಿಲ್ಲೆಯ ಬೀಳಗಿ ತಾಲ್ಲೂಕಿನ ಬಾಡಗಂಡಿಯ ಎಸ್.ಆರ್.ಪಾಟೀಲ ಶಿಕ್ಷಣ ಪ್ರತಿಷ್ಠಾನದಿಂದ ಕೊಡಮಾಡುವ, ಈ ಸಾಲಿನ ‘ಅಬ್ಬೆ’ ಪ್ರಶಸ್ತಿಗೆ ಕಾಂಗ್ರೆಸ್ ಮುಖಂಡರಾದ ರಾಣಿ ಸತೀಶ್ ಹಾಗೂ ‘ಕೃಷಿ’ ಪ್ರಶಸ್ತಿಗೆ ಬಾಗಲಕೋಟೆ ಜಿಲ್ಲೆಯ ಮಲ್ಲಣ್ಣ ಚಂದ್ರಶೇಖರ ಮೇಟಿ ಭಾಜನರಾಗಿದ್ದಾರೆ.
ಪ್ರಶಸ್ತಿಯು ತಲಾ ₹ 1 ಲಕ್ಷ ನಗದು ಒಳಗೊಂಡಿದ್ದು, ಡಿ.7ರಂದು ಬಾಡಗಂಡಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.