ADVERTISEMENT

ಎಸ್ಸೆಸ್ಸೆಲ್ಸಿ ಪರೀಕ್ಷೆ; ನಾಳೆ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2020, 19:45 IST
Last Updated 21 ಮಾರ್ಚ್ 2020, 19:45 IST
ಸಚಿವ ಎಸ್‌.ಸುರೇಶ್‌ ಕುಮಾರ್
ಸಚಿವ ಎಸ್‌.ಸುರೇಶ್‌ ಕುಮಾರ್   

ಚಾಮರಾಜನಗರ: ‘ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯನ್ನು ಕೊರೊನಾ ವೈರಸ್‌ ಭೀತಿ ಕಾರಣಕ್ಕೆ ಮುಂದೂಡಬೇಕೇ ಅಥವಾ ನಿಗದಿಯಂತೆ ನಡೆಸಬೇಕೇ ಎಂಬ ಬಗ್ಗೆ ಸೋಮವಾರ (ಮಾರ್ಚ್‌ 23) ನಿರ್ಧರಿಸಲಾಗುವುದು’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ಶನಿವಾರ ಇಲ್ಲಿ ಹೇಳಿದರು.

‘ಇದೇ 27ರಿಂದ ಪರೀಕ್ಷೆ ನಿಗದಿ ಯಾಗಿದೆ. ಇನ್ನೂ ಐದಾರು ದಿನಗಳ ಕಾಲಾವಕಾಶ ಇದೆ. ಸೋಮವಾರ ಆರೋಗ್ಯ ಸಚಿವ ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಡಾ.ಎಸ್‌.ಸುಧಾಕರ್‌ ಜೊತೆ ಚರ್ಚೆ ನಡೆಸಿ ಪರಿಸ್ಥಿತಿ ಅವಲೋಕಿಸ ಲಾಗುವುದು. ಪರೀಕ್ಷೆ ನಡೆಸುವುದಾದರೆ, ಕೈಗೊಳ್ಳಬೇಕಾದ ಕ್ರಮಗಳ
ಬಗ್ಗೆಯೂ ಚರ್ಚಿಸಲಾಗುವುದು. ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿರಿಸಿಕೊಂಡು ಶಿಕ್ಷಣ ಇಲಾಖೆಯು ತೀರ್ಮಾನ ಕೈಗೊಳ್ಳಲಿದೆ’ ಎಂದು ಹೇಳಿದರು.

ನಿಗದಿಯಂತೆ ಪರೀಕ್ಷೆ ನಡೆಯಲಿದೆ ಎಂಬ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ‘ಇನ್ನೂ ಸಮಯ ಇರುವುದರಿಂದ ಆ ರೀತಿ ಹೇಳಿರಬಹುದು. ಸೋಮವಾರ ಅವರ ಜೊತೆಗೂ ಚರ್ಚೆ ಮಾಡುತ್ತೇವೆ’ ಎಂದರು.

ADVERTISEMENT

‘ಪರೀಕ್ಷೆಯ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ವಿದ್ಯಾರ್ಥಿ ಗಳೂ ಗೊಂದಲಕ್ಕೆ ಒಳಗಾಗಬೇಕಿಲ್ಲ’ ಎಂದು ನುಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.