ADVERTISEMENT

ಪ್ರಹ್ಲಾದ್‌ ವಿರುದ್ಧ ಎಸಿಬಿಗೆ ದೂರು

​ಪ್ರಜಾವಾಣಿ ವಾರ್ತೆ
Published 16 ಜೂನ್ 2020, 21:45 IST
Last Updated 16 ಜೂನ್ 2020, 21:45 IST

ಬೆಂಗಳೂರು: ಬಿಬಿಎಂಪಿ ಅಧಿಕಾರಿ ಬಿ.ಎಸ್. ಪ್ರಹ್ಲಾದ್‌ ವಿರುದ್ಧ ಬೆಂಗಳೂರು ನಾಗರಿಕ ಹಕ್ಕು ಹೋರಾಟ ಸಮಿತಿಯ ಉಪಾಧ್ಯಕ್ಷ ಬಿ. ಗಣೇಶ್‌ ಸಿಂಗ್‌ ಎಂಬುವರು ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದಾರೆ.

‘ಬಿ.ಎಸ್. ಪ್ರಹ್ಲಾದ್‌ ಅವರು ಈಗಾಗಲೇ ಹಲವು ಭ್ರಷ್ಟಾಚಾರ ಪ್ರಕರಣಗಳ ಅಡಿ ವಿಚಾರಣೆ ಎದುರಿಸುತ್ತಿದ್ದಾರೆ. ಆದರೆ, ಅವರಿಗೆನಿಯಮ ಬಾಹಿರವಾಗಿ ಮುಖ್ಯ ಎಂಜಿನಿಯರ್‌ ಸ್ಥಾನಕ್ಕೆ ಬಡ್ತಿ ನೀಡಿರುವುದಲ್ಲದೇ, ಪಾಲಿಕೆಯ ರಸ್ತೆಗಳ ಮೂಲಸೌಕರ್ಯ ವಿಭಾಗದ ಹೊಣೆ ನೀಡಿರುವುದು ಸರಿಯಲ್ಲ’ ಎಂದು ಅವರು ದೂರಿನಲ್ಲಿ ಹೇಳಿದ್ದಾರೆ.

‘ಸ್ಥಳೀಯ ರಾಜಕೀಯ ನಾಯಕರೊಬ್ಬರು ನನ್ನ ವಿರುದ್ಧ ಎಸಿಬಿಗೆ ಸುಳ್ಳು ದೂರು ನೀಡಿದ್ದರು. ಅದರ ಬಗ್ಗೆ ಈಗಾಗಲೆ ತನಿಖೆ ನಡೆಯುತ್ತಿರುವುದರಿಂದ ಬೇರೆ ತನಿಖೆ ಅಗತ್ಯವಿಲ್ಲ ಎಂದು ನಗರಾಭಿವೃದ್ಧಿ ಇಲಾಖೆ ಹೇಳಿತ್ತು. ಹಾಗಾಗಿ ಮತ್ತೆ ಬೇರೊಬ್ಬರ ಹೆಸರಿನಲ್ಲಿ ದೂರು ನೀಡಿದ್ದಾರೆ. ಅವರಿಗೆ ಅಧಿಕಾರಿಗಳಿಗೆ ಕಿರಿಕಿರಿ ನೀಡುವುದು ಚಾಳಿ ಆಗಿ ಬಿಟ್ಟಿದೆ’ ಎಂದು ಪ್ರಹ್ಲಾದ್ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.