ಬೆಂಗಳೂರು: ಎಸಿಬಿ ಅಧಿಕಾರಿಗಳು ಶನಿವಾರ ಬೆಳಗಿನ ಜಾವ ಇನ್ನಿಬ್ಬರು ಅಧಿಕಾರಿಗಳ ಮೇಲೆ ದಾಳಿ ನಡೆಸಿದ್ದಾರೆ.
ಬೆಳಗಾವಿ ಜಿಲ್ಲೆ ಖಾನಾಪುರ ಉಪ ವಿಭಾಗದ ಎಸಿಎಫ್ ಚಂದ್ರಗೌಡ ಬಿ.ಪಾಟೀಲ ಮತ್ತು ಬಾಗಲಕೋಟೆ ಉಪ ವಿಭಾಗದ ಗ್ರಾಮೀಣ ನೀರು ಸರಬರಾಜು ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಚಿದಾನಂದ ಬಿ. ಮಿಂಚಿನಾಳ ಅವರೇ ದಾಳಿಗೆ ಒಳಗಾದ ಅಧಿಕಾರಿಗಳು.
ಚಿದಾನಂದಗೌಡ ಅವರಿಗೆ ಸೇರಿದ ರಾಮತೀರ್ಥನಗರದ ಮನೆ, ಖಾನಾಪುರದಲ್ಲಿರು ಕಚೇರಿ, ಬೈಲವಂಗಲದ ಸಹೋದರನ ಮನೆಯಲ್ಲಿ ಶೋಧ ನಡೆಯುತ್ತಿದೆ. ಮಿಂಚಿನಾಳ ಅವರ ವಿಜಯಪುರದಲ್ಲಿರುವ ಎರಡು ಮನೆಗಳು ಮತ್ತು ಕಚೇರಿಯಲ್ಲಿ ಪರಿಶೀಲಿಸಲಾಗುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.