ADVERTISEMENT

ಅಕ್ರಮ ಆಸ್ತಿ ಗಳಿಕೆ ಆರೋಪ: ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಎಸಿಬಿ ದಾಳಿ

​ಪ್ರಜಾವಾಣಿ ವಾರ್ತೆ
Published 28 ಡಿಸೆಂಬರ್ 2018, 6:11 IST
Last Updated 28 ಡಿಸೆಂಬರ್ 2018, 6:11 IST
   

ದಾವಣಗೆರೆ: ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಹಂಸವೇಣಿ ಹಾಗೂ ಅವರ ಪತಿ ಕಾರವಾರದ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಎನ್.ಕುಮಾರ್ ಅವರ ಸಿದ್ದವೀರಪ್ಪ ಬಡಾವಣೆಯ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಶುಕ್ರವಾರ ಮುಂಜಾನೆ ಏಕಕಾಲಕ್ಕೆ ದಾವಣಗೆರೆ ನಿವಾಸ ಹಾಗೂ ಕಾರವಾರದ ನಿವಾಸಗಳ ಮೇಲೆ ದಾಳಿ ನಡೆಸಿ ಅಕ್ರಮ ಆಸ್ತಿ ಸಂಬಂಧಿಸಿದಂತೆ ದಾಖಲೆಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಎಸಿಬಿ ಡಿವೈಎಸ್ಪಿ ಪರಮೇಶ್ವರ್ ತಿಳಿಸಿದರು.

ಉಡುಪಿ: ಮಾಜಿ ನಗರಸಭೆ ಆಯುಕ್ತ ಹಾಗೂ ಸರ್ಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದ ರೀಡರ್ ಮಂಜುನಾಥಯ್ಯ ಅವರ ಮಣಿಪಾಲದ ನಿವಾಸದ ಮೇಲೆಇನ್‌ಸ್ಪೆಕ್ಟರ್ಯೋಗೇಶ್ ಕುಮಾರ್ ನೇತೃತ್ವದ ತಂಡ ದಾಳಿ ನಡೆಸಿದ್ದು, ತಪಾಸಣೆ ಮಾಡುತ್ತಿದೆ.

ADVERTISEMENT

ಮಂಜುನಾಥಯ್ಯ, ಈ ಹಿಂದೆ ಉಡುಪಿಯಲ್ಲಿ ನಗರಸಭೆ ಆಯುಕ್ತ ಸೇರಿದಂತೆ ಹಲವು ಹುದ್ದೆಗಳಲ್ಲಿದ್ದರು. ಕೆಲವು ತಿಂಗಳ ಹಿಂದೆ ಸರ್ಕಾರಿ ಶಿಕ್ಷಣ ಮಹಾವಿದ್ಯಾಲಯದ ರೀಡರ್ ಹುದ್ದೆಗೆ ವರ್ಗಾವಣೆಗೊಂಡಿದ್ದರು.

ಸದ್ಯ ಅವರು ಒಂದು ತಿಂಗಳಿನಿಂದ ಅನಾರೋಗ್ಯದ ಕಾರಣ ನೀಡಿ ವೈದ್ಯಕೀಯ ರಜೆಯಲ್ಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.