ಬೆಂಗಳೂರು: ಸ್ವತ್ತೊಂದರ ಖಾತೆ ಬದಲಾವಣೆ ಮಾಡಿಕೊಡಲು ₹ 12 ಸಾವಿರ ಲಂಚ ಪಡೆಯುತ್ತಿದ್ದ ಬಿಬಿಎಂಪಿಯ ಕಂದಾಯ ನಿರೀಕ್ಷಕ ಚಂದ್ರಶೇಖರ್ (40) ಅವರನ್ನು ಶನಿವಾರ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಬಂಧಿಸಿದ್ದಾರೆ.
ಮಾರತಹಳ್ಳಿ ಸಹಾಯಕ ಕಂದಾಯ ಅಧಿಕಾರಿ ಕಚೇರಿಯಲ್ಲಿ ಕಂದಾಯ ನಿರೀಕ್ಷಕರಾಗಿರುವ ಆರೋಪಿ ಚಂದ್ರಶೇಖರ್ ಬೆಳ್ಳಂದೂರು 150ನೇ ವಾರ್ಡ್ ಆಸ್ತಿ ತೆರಿಗೆ ಮೌಲ್ಯಮಾಪಕರಾಗಿದ್ದಾರೆ. ಅರ್ಜಿದಾರರಿಂದ ಆರೋಪಿ ಲಂಚ ಪಡೆಯುವಾಗ ಎಸಿಬಿ ಡಿವೈಎಸ್ಪಿ ಜಗದೀಶ್ ಬಂಧಿಸಿದ್ದಾರೆ.
ಬಂಧಿತರಿಂದ ಹಣ ವಶಪಡಿಸಿಕೊಳ್ಳಲಾಗಿದೆ. ಎಸಿಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.