ADVERTISEMENT

ಹೈಕಮಾಂಡ್‌ ನಿರ್ಧಾರಕ್ಕೆ ಬದ್ಧ: ಶ್ರೀನಿವಾಸ ಪೂಜಾರಿ

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2020, 21:13 IST
Last Updated 29 ಸೆಪ್ಟೆಂಬರ್ 2020, 21:13 IST
ಕೋಟ ಶ್ರೀನಿವಾಸ ಪೂಜಾರಿ, ಸಚಿವ
ಕೋಟ ಶ್ರೀನಿವಾಸ ಪೂಜಾರಿ, ಸಚಿವ   

ಉಡುಪಿ: 'ಸಚಿವ ಸಂಪುಟದಲ್ಲಿ ಯಾರು ಇರಬೇಕು, ಯಾರು ಇರಬಾರದು ಎಂಬ ತೀರ್ಮಾನವನ್ನು ಕೈಕಮಾಂಡ್‌ ತೆಗೆದುಕೊಳ್ಳಲಿದ್ದು, ಆ ನಿರ್ಧಾರಕ್ಕೆ ಬದ್ಧನಾಗಿದ್ದೇನೆ‘ ಎಂದು ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಕಾರ್ಕಳದಲ್ಲಿಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, 'ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪಅವರು ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದಾರೆ. ಅವರ ಸ್ಥಾನಕ್ಕೆ ಚ್ಯುತಿ ಇಲ್ಲ ಎಂಬುದನ್ನು ಹೇಳಬಲ್ಲೆ. ಸಂಪುಟ ಪುನಾರಚನೆ ಬಗ್ಗೆ ಎರಡ್ಮೂರು ದಿನಗಳಲ್ಲಿ ಮುಖ್ಯಮಂತ್ರಿಗಳು ದೆಹಲಿಗೆ ತೆರಳಿ ವರಿಷ್ಠರ ಬಳಿ ಚರ್ಚಿಸಲಿದ್ದಾರೆ' ಎಂದು
ಕೋಟ ತಿಳಿಸಿದರು.

ಆಯ್ದ ದೇವಾಲಯಗಳಲ್ಲಿ ಗೋಶಾಲೆ:'ರಾಜ್ಯದ ಆಯ್ದ 25 ದೇವಾಲಯಗಳಲ್ಲಿ ಗೋಶಾಲೆಗಳನ್ನು ಆರಂಭಿಸಲು ಸರ್ಕಾರ ಚಿಂತನೆ ನಡೆಸಿದೆ'ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.