ಚಿಕ್ಕಮಗಳೂರು:ತಾಲ್ಲೂಕಿನ ಚಿಕ್ಕಮಗಳೂರು–ಮೂಡಿಗೆರೆ ರಸ್ತೆಯಲ್ಲಿರುವ ಬಂಟರ ಭವನದ ಬಳಿ ಪೊಲೀಸ್ ಜೀಪ್ ಶನಿವಾರ ಬೆಳಿಗ್ಗೆ ಪಲ್ಟಿಯಾಗಿದ್ದು, ಇನ್ಸ್ಪೆಕ್ಟರ್ ಸೇರಿ ನಾಲ್ಕು ಮಂದಿಗೆ ಗಾಯಗಳಾಗಿವೆ.
ಪೊಲೀಸ್ ಜೀಪಿನಲ್ಲಿದ್ದ ಮೂಡಿಗೆರೆ ಇನ್ಸ್ಪೆಕ್ಟರ್ ಕೆ.ಕೆ.ರಘು, ಕಾನ್ಸ್ಟೇಬಲ್ಗಳಾದ ಮಂಜುನಾಥ್, ಮನು, ವೀಣಾ ಅವರಿಗೆ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಪಲ್ಟಿಯ ತೀವ್ರತೆಗೆ ಜೀಪ್ ನಜ್ಜುಗುಜ್ಜಾಗಿದೆ. ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಏರ್ಪಡಿಸಿದ್ದ ಸಭೆಗೆ ಮೂಡಿಗೆರೆಯಿಂದ ಅವರು ಬರುತ್ತಿದ್ದರು.
ಚಿಕ್ಕಮಗಳೂರಿನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.