ಕೋಲಾರ: ಜಿಲ್ಲೆಯ ಬಂಗಾರಪೇಟೆ ಹೊರವಲಯದಲ್ಲಿ ಬುಧವಾರ ಖಾಸಗಿ ಬಸ್ ಹಾಗೂ ಬೈಕ್ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸಜೀವ ದಹನವಾಗಿದ್ದಾನೆ.
ಬಂಗಾರಪೇಟೆ ಪಟ್ಟಣದ ವಿವೇಕಾನಂದನಗರ ನಿವಾಸಿ ನೀರಜ್ (21) ಮೃತಪಟ್ಟ ಯುವಕ. ಆತ ಸ್ನೇಹಿತನ ಜತೆ ಬೈಕ್ನಲ್ಲಿ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ.
ಶ್ರೀ ಗುರುರಾಜ ಟ್ರಾವೆಲ್ಸ್ ಏಜೆನ್ಸಿಗೆಸೇರಿದ ಬಸ್, ನೀರಜ್ ಅವರಬೈಕ್ಗೆ ಎದುರುಗಡೆಯಿಂದ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ ಗೆ ಬೆಂಕಿ ಹೊತ್ತಿಕೊಂಡು ನೀರಜ್ ಸಜೀವ ದಹನವಾಗಿದ್ದಾರೆ. ಘಟನೆಯಲ್ಲಿ ಬೈಕ್ ಸುಟ್ಟು ಕರಕಲಾಗಿದೆ. ಹಿಂಬದಿ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಂಗಾರಪೇಟೆ ಪೊಲೀಸರು ಬಸ್ಚಾಲಕನನ್ನು ಬಂಧಿಸಿ ವಾಹನ ವಶಕ್ಕೆ ತೆಗೆದುಕೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.