ADVERTISEMENT

ಅಪಘಾತ: ಹೊಸಕೋಟೆ ಡಿವೈಎಸ್ಪಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 28 ಜೂನ್ 2020, 21:47 IST
Last Updated 28 ಜೂನ್ 2020, 21:47 IST

ಬೆಂಗಳೂರು: ನಗರದ ಮಾನ್ಯತಾ ಟೆಕ್ ಪಾರ್ಕ್ ಬಳಿ ಭಾನುವಾರ ಅಪಘಾತ ಸಂಭವಿಸಿದ್ದು, ಹೊಸಕೋಟೆ ವಿಭಾಗದ ಡಿವೈಎಸ್ಪಿ ಎನ್‌.ಬಿ. ಸಕ್ರಿ ಗಾಯಗೊಂಡಿದ್ದಾರೆ.

‘ಸಕ್ರಿ ಅವರು ಹೆಬ್ಬಾಳದಲ್ಲಿರುವ ಮನೆಯಿಂದ ಹೊಸಕೋಟೆಯಲ್ಲಿರುವ ತಮ್ಮ ಕಚೇರಿಗೆ ಪೊಲೀಸ್ ವಾಹನದಲ್ಲಿ ಹೊರಟಿದ್ದಾಗ ಈ ಅವಘಡ ಸಂಭವಿಸಿದೆ’ ಎಂದು ಚಿಕ್ಕಜಾಲ ಸಂಚಾರ ಪೊಲೀಸರು ತಿಳಿಸಿದರು.

‘ಚಾಲಕ ಹಾಗೂ ಸಕ್ರಿ ವಾಹನದಲ್ಲೇ ಸಿಲುಕಿಕೊಂಡಿದ್ದರು. ಅವರಿಬ್ಬರನ್ನು ಸ್ಥಳೀಯರು ವಾಹನದಿಂದ ಹೊರಗೆ ತಂದು ರಕ್ಷಿಸಿದ್ದಾರೆ. ಸಕ್ರಿ ಅವರ ಎಡ ಕೈಗೆ ಗಾಯವಾಗಿದೆ. ಚಾಲಕನಿಗೂ ಸಣ್ಣಪುಟ್ಟ ಗಾಯಗಳಾಗಿವೆ’ ಎಂದೂ ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.