ಮಧುಗಿರಿ: ಬಹುಕೋಟಿ ಐಎಂಎ ಹಗರಣದಲ್ಲಿ ವಿಚಾರಣೆ ಎದುರಿಸುತ್ತಿರುವ ನಿವೃತ್ತ ಕೆಎಎಸ್ ಅಧಿಕಾರಿ ಎಲ್.ಸಿ.ನಾಗರಾಜ್ ಬಿಜೆಪಿಯತ್ತ ಮುಖ ಮಾಡಿದ್ದಾರೆ.
ಬೆಂಗಳೂರು ಉತ್ತರ ಉಪ ವಿಭಾಗಾಧಿಕಾರಿಯಾಗಿದ್ದ ಸಮಯದಲ್ಲಿ ಬಹುಕೋಟಿ ವಂಚನೆ ಪ್ರಕರಣದಲ್ಲಿ ಐಎಂಎ ಪರ ವರದಿ ನೀಡಲು ₹4.5 ಕೋಟಿ ಲಂಚ ಪಡೆದ ಆರೋಪದ ಮೇಲೆ ನಾಗರಾಜ್ ಅವರನ್ನು ಬಂಧಿಸಲಾಗಿತ್ತು. ಮಾ. 9ರಂದು ಸರ್ಕಾರ ಇವರ ರಾಜೀನಾಮೆಯನ್ನು ಅಂಗೀಕರಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.