ಬೆಂಗಳೂರು: ‘ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರು, ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರ ತೆಗೆಸಿ ಅಪಮಾನ ಮಾಡಿದ್ದಾರೆ ಎನ್ನಲಾದ ಆರೋಪ ಕುರಿತು ಘಟನೆಯ ವರದಿ ತರಿಸಿಕೊಂಡು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು’ ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ತಿಳಿಸಿದ್ದಾರೆ.
ಈ ಕುರಿತಂತೆ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ ನೇತೃತ್ವದ ನಿಯೋಗ ಅವಸ್ಥಿ ಅವರನ್ನು ಗುರುವಾರ ಮಧ್ಯಾಹ್ನ ಹೈಕೋರ್ಟ್ನಲ್ಲಿ ಭೇಟಿ ಮಾಡಿ ಚರ್ಚಿಸಿತು. ಮುಖ್ಯ ನ್ಯಾಯಮೂರ್ತಿಗಳು ವರದಿ ತರಿಸಿಕೊಂಡು ಪರಿಶೀಲಿಸುವುದಾಗಿ ನಿಯೋಗಕ್ಕೆ ತಿಳಿಸಿದ್ದಾರೆ. ‘ಪ್ರಕರಣಕ್ಕೆ ಸಂಬಂಧಿಸಿ ಸಮಗ್ರ ತನಿಖೆಗೆ ಆದೇಶಿಸಬೇಕು,ಮಲ್ಲಿಕಾರ್ಜುನ ಗೌಡ ಅವರನ್ನು ವಜಾಗೊಳಿಸಬೇಕು‘ ಎಂದು ವಿವೇಕ್ ಸುಬ್ಬಾರೆಡ್ಡಿ ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.