ADVERTISEMENT

₹61.86 ಕೋಟಿ ಮೊತ್ತದ ಕ್ರಿಯಾ ಯೋಜನೆಗಳಿಗೆ ಒಪ್ಪಿಗೆ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2022, 16:06 IST
Last Updated 14 ಅಕ್ಟೋಬರ್ 2022, 16:06 IST
   

ಬೆಂಗಳೂರು: ಮುಖ್ಯಮಂತ್ರಿಯವರ ಅಮೃತ ನಗರೋತ್ಥಾನ ಯೋಜನೆಯಡಿ ರಾಜ್ಯದ ಮೂರು ಜಿಲ್ಲೆಗಳ ಏಳು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕೈಗೆತ್ತಿಕೊಳ್ಳಲಿರುವ ₹61.86 ಕೋಟಿ ವೆಚ್ಚದ ಕಾಮಗಾರಿಗಳ ಕ್ರಿಯಾಯೋಜನೆಗಳಿಗೆ ಪೌರಾಡಳಿತ ಸಚಿವ ಎಂ.ಟಿ.ಬಿ. ನಾಗರಾಜು ಅಧ್ಯಕ್ಷತೆಯ ಉನ್ನತಮಟ್ಟದ ಸಮಿತಿ ಶುಕ್ರವಾರ ಒಪ್ಪಿಗೆ ನೀಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ನಗರಸಭೆಯ ₹19.36 ಕೋಟಿ, ಸೋಮೇಶ್ವರ ಪುರಸಭೆಯ ₹ 8.5 ಕೋಟಿ, ಕೋಟೆಕಾರು ಪಟ್ಟಣ ಪಂಚಾಯಿತಿಯ ₹4.25 ಕೋಟಿ, ಬೆಳಗಾವಿ ಜಿಲ್ಲೆ ಚಿಕ್ಕೋಡಿ ಹಾಗೂ ಸದಲಗಾ ಪುರಸಭೆಗಳ ತಲಾ ₹ 8.5 ಕೋಟಿ, ರಾಯಚೂರು ಚಿಲ್ಲೆಯ ಮಾನವಿ ಪುರಸಭೆಯ ₹ 8.5 ಕೋಟಿ ಮತ್ತು ಕವಿತಾಳ ಪಟ್ಟಣ ಪಂಚಾಯಿತಿಯ ₹ 4.25 ಕೋಟಿ ವೆಚ್ಚದ ಕಾಮಗಾರಿಗಳ ಕ್ರಿಯಾಯೋಜನೆಗೆ ಅನುಮೋದನೆ ನೀಡಲಾಗಿದೆ.

ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಸಚಿವರು, ‘ಮುಖ್ಯಮಂತ್ರಿಯವರ ಅಮೃತ ನಗರೋತ್ಥಾನ ಯೋಜನೆಯ ನಾಲ್ಕನೇ ಹಂತದಲ್ಲಿ ₹ 3,885 ಕೋಟಿ ವೆಚ್ಚದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸಂಪುಟ ಸಭೆ ಅನುಮೋದನೆ ನೀಡಿದೆ. ಅದಕ್ಕೆ ಪೂರಕವಾಗಿ ಈವರೆಗೆ 299 ನಗರ ಸ್ಥಳೀಯ ಸಂಸ್ಥೆಗಳ ಕ್ರಿಯಾಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. 271 ಸ್ಥಳೀಯ ಸಂಸ್ಥೆಗಳಲ್ಲಿ ಟೆಂಡರ್‌ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.