ADVERTISEMENT

ಅಕ್ರಮ ವಲಸಿಗರನ್ನು ಹೊರಹಾಕಲು ಕ್ರಮ: ಗೃಹ ಸಚಿವ ಆರಗ ಜ್ಞಾನೇಂದ್ರ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2021, 10:27 IST
Last Updated 15 ಆಗಸ್ಟ್ 2021, 10:27 IST
ಗೃಹ ಸಚಿವ ಆರಗ ಜ್ಞಾನೇಂದ್ರ
ಗೃಹ ಸಚಿವ ಆರಗ ಜ್ಞಾನೇಂದ್ರ   

ಚಿಕ್ಕಮಗಳೂರು: ‘ಅಕ್ರಮ ವಲಸಿಗರನ್ನು ಹೊರಹಾಕಲು ಪ್ರಯತ್ನ ನಡೆಯುತ್ತಿದೆ. ವೀಸಾ ಅವಧಿ ಮುಗಿದಿರುವವರನ್ನು ಬಂಧಿಸಬೇಕು, ಇಲ್ಲವೇ ಹೊರ ದಬ್ಬಬೇಕು. ಈ ಬಗ್ಗೆ ಕ್ರಮ ವಹಿಸಲು ಅಧಿಕಾರಿಗಳಿಗೆ ತಿಳಿಸಿದ್ದೇನೆ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಕೆಲವರು ಉದ್ದೇಶಪೂರ್ವಕವಾಗಿ ಸಣ್ಣಪುಟ್ಟ ಕೇಸು ಹಾಕಿಸಿಕೊಂಡು ಇಲ್ಲಿ ಇರುತ್ತಾರೆ. ಇಲ್ಲಿಯೇ ನೆಲೆಸಲು ಪ್ರಯತ್ನ ನಡೆಸುತ್ತಾರೆ’ ಎಂದು ಪ್ರತಿಕ್ರಿಯಿಸಿದರು.

‘ಅಕ್ರಮ ವಲಸಿಗರ ಸಮಸ್ಯೆ ಬೆಂಗಳೂರಿನಲ್ಲಿ ಜಾಸ್ತಿ ಇದೆ. ಯಾವ್ಯಾವ ಪ್ರದೇಶದಲ್ಲಿ ಇದ್ದಾರೆ ಎಂಬ ಬಗ್ಗೆ ಸಮೀಕ್ಷೆ ನಡೆಯುತ್ತಿದೆ’ ಎಂದು ಉತ್ತರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.