ADVERTISEMENT

ವಿಧಾನಸೌಧ ಪೂರ್ವದ ಗೇಟ್‌ ತೆರೆಸಲು ಕ್ರಮ: ಯು.ಟಿ.ಖಾದರ್‌

​ಪ್ರಜಾವಾಣಿ ವಾರ್ತೆ
Published 11 ಜುಲೈ 2023, 16:08 IST
Last Updated 11 ಜುಲೈ 2023, 16:08 IST
ವಿಧಾನಸೌಧ
ವಿಧಾನಸೌಧ   

ಬೆಂಗಳೂರು: ವಿಧಾನಸೌಧದ ಪೂರ್ವದ ಗೇಟು ತೆಗೆಸಿ ವಾಹನಗಳ ಓಡಾಟಕ್ಕೆ ಅನುಕೂಲ ಮಾಡಲು ಕ್ರಮ ತೆಗೆದುಕೊಳ್ಳುವುದಾಗಿ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ ಹೇಳಿದರು.

ವಿಧಾನಸಭೆಯಲ್ಲಿ ಇಂಧನ ಸಚಿವ ಕೆ.ಜೆ.ಜಾರ್ಜ್‌ ಮಾತನಾಡಿ, ಮೆಟ್ರೊ ಕಾಮಗಾರಿ ಸಂದರ್ಭದಲ್ಲಿ ಪೂರ್ವದ ಗೇಟ್‌ ಮುಚ್ಚಿಸಿ, ಪಶ್ಚಿಮದ ಗೇಟ್‌ ಮೂಲಕ ಮಾತ್ರ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು. ಒಂದೇ ಗೇಟ್‌ ಮೂಲಕ ಓಡಾಟಕ್ಕೆ ಅವಕಾಶ ನೀಡಿರುವುದರಿಂದ ಸುತ್ತಮುತ್ತ ಸಂಚಾರ ದಟ್ಟಣೆ ಹೆಚ್ಚಾಗಿದೆ. ಇನ್ನಾದರೂ ಗೇಟ್‌ ತೆಗೆಸಿ ಎಂದು ಸಲಹೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT