ADVERTISEMENT

ಸಿಡಿ ಪ್ರಕರಣ| ಸಂತ್ರಸ್ತೆಯಿಂದ ಮಾಹಿತಿ ಪಡೆದು ಮುಂದಿನ ಕ್ರಮ: ಡಿಸಿಪಿ ಅನುಚೇತ್‌

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2021, 15:00 IST
Last Updated 2 ಮಾರ್ಚ್ 2021, 15:00 IST
ಡಿಸಿಪಿ ಎಂ. ಎನ್‌. ಅನುಚೇತ್‌
ಡಿಸಿಪಿ ಎಂ. ಎನ್‌. ಅನುಚೇತ್‌    

ಬೆಂಗಳೂರು: ಯುವತಿಯೊಬ್ಬರ ಜೊತೆ ಸಲುಗೆ ಬೆಳೆಸಿ ಲೈಂಗಿಕ ಸಂಪರ್ಕವಿಟ್ಟುಕೊಂಡಿದ್ದ ಸಚಿವರೊಬ್ಬರ ‘ಸಿ.ಡಿ’ ಬಗ್ಗೆ ನಾಗರಿಕ ಹಕ್ಕು ಹೋರಾಟ ಸಮಿತಿಯ ಅಧ್ಯಕ್ಷ ದಿನೇಶ್‌ ಕಲ್ಲಹಳ್ಳಿ ಅವರು ನಗರದ ಕಬ್ಬನ್ ಪಾರ್ಕ ಠಾಣೆಗೆ ದೂರು ನೀಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್. ಅನುಚೇತ್, ‘ದಿನೇಶ್ ಎಂಬುವರು ಠಾಣೆಗೆ ಬಂದು ನಮಗೊಂದು ದೂರು ಕೊಟ್ಟಿದ್ದಾರೆ. ತನಿಖೆ ಆರಂಭಿಸಲಾಗಿದ್ದು, ಸಂತ್ರಸ್ತೆ ಹಾಗೂ ಅವರ ಕುಟುಂಬದವರನ್ನು ಸಂಪರ್ಕಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ’ ಎಂದರು.

ADVERTISEMENT

‘ಸಚಿವರು, ಮಹಿಳೆಗೆ ಬೆದರಿಕೆಯೊಡ್ಡಿದ್ದಾರೆ. ಈ ಬಗ್ಗೆ ಸಂತ್ರಸ್ತೆ ಹಾಗೂ ಕುಟುಂಬಸ್ಥರು, ತನಗೆ ತಿಳಿಸಿರುವುದಾಗಿ ದೂರುದಾರ ದಿನೇಶ್ ಹೇಳಿದ್ದಾರೆ. ಅವರಿಂದ ಮತ್ತಷ್ಟು ಮಾಹಿತಿ ಪಡೆಯಬೇಕಿದೆ. ನಾವೇ ಸಂತ್ರಸ್ತೆ ಹಾಗೂ ಕುಟುಂಬದವರನ್ನು ಸಂಪರ್ಕಿಸಿ ಹೇಳಿಕೆ ಪಡೆದು ಮುಂದಿನ ಕ್ರ ಕೈಗೊಳ್ಳುತ್ತೇವೆ’ ಎಂದೂ ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.