ಹೊಸಪೇಟೆ: ಕೊರೊನಾ ಸೋಂಕು ಹರಡದಂತೆ ಘೋಷಿಸಿರುವ ಲಾಕ್ಡೌನ್ನಿಂದ ಕನ್ನಡದ ಹಿರಿಯ ನಟಿ ಜಯಂತಿ ಹಾಗೂ ಅವರ ಮಗ ಕೃಷ್ಣಕುಮಾರ ಅವರು ತಾಲ್ಲೂಕಿನ ಹಂಪಿ ಸಮೀಪದ ಹೋಟೆಲ್ನಲ್ಲಿ ಸಿಲುಕಿಕೊಂಡಿದ್ದಾರೆ.
‘ಮಾ.24ರಂದು ದೇಶದಾದ್ಯಂತ ಲಾಕ್ಡೌನ್ ಘೋಷಿಸಲಾಗಿತ್ತು. ಅದಕ್ಕೂ ಎರಡು ದಿನಗಳ ಮೊದಲು ನಾನು, ನನ್ನಮ್ಮ ಹಂಪಿ ನೋಡಲು ಬಂದಿದ್ದೆವು. ಏಕಾಏಕಿ ಲಾಕ್ಡೌನ್ ಘೋಷಿಸಿದ್ದರಿಂದ ಹೋಟೆಲ್ನಲ್ಲೇ ಉಳಿದುಕೊಂಡೆವು. ಏ. 14ರ ವರೆಗೆ ಇಲ್ಲೇ ಉಳಿದು ನಂತರ ಬೆಂಗಳೂರಿಗೆ ಹೋಗಲು ನಿರ್ಧರಿಸಿದ್ದೆವು. ಮಂಗಳವಾರ ಪ್ರಧಾನಿ ಏನು ನಿರ್ಧಾರ ತೆಗೆದುಕೊಳ್ಳುತ್ತಾರೆ ನೋಡಿಕೊಂಡು ಮುಂದುವರೆಯಲು ನಿರ್ಧರಿಸಿದ್ದೇವೆ’ ಎಂದು ಕೃಷ್ಣಕುಮಾರ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.
‘ಹೋಟೆಲ್ನಲ್ಲಿ ಯಾವುದೇ ತೊಂದರೆಯಿಲ್ಲ. ಇಬ್ಬರೂ ಕ್ಷೇಮವಾಗಿದ್ದೇವೆ. ಬೆಂಗಳೂರಿನಲ್ಲಿದ್ದರೂ ಇದೇ ರೀತಿ ಮನೆಯಲ್ಲೇ ಇರಬೇಕಾಗಿತ್ತು’ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.