ADVERTISEMENT

ರಂಗಾಯಣಕ್ಕೆ ಅಡ್ಡಂಡ ಕಾರ್ಯಪ್ಪ ನಿರ್ದೇಶಕ

​ಪ್ರಜಾವಾಣಿ ವಾರ್ತೆ
Published 27 ಡಿಸೆಂಬರ್ 2019, 20:32 IST
Last Updated 27 ಡಿಸೆಂಬರ್ 2019, 20:32 IST

ಬೆಂಗಳೂರು: ಮೈಸೂರಿನ ರಂಗಾಯಣ ನಿರ್ದೇಶಕರಾಗಿ ಅಡ್ಡಂಡ ಕಾರ್ಯಪ್ಪ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಹಿಂದಿನ ಸರ್ಕಾರದ ಅವಧಿಯಲ್ಲಿ ನೇಮಕವಾಗಿದ್ದ ರಂಗಾಯಣದ ನಾಲ್ಕೂ ವಿಭಾಗಗಳ ನಿರ್ದೇಶಕರ ನೇಮಕಾತಿಯನ್ನು, ಬಿ.ಎಸ್‌. ಯಡಿಯೂರಪ್ಪ ಅವರುಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಕೂಡಲೇ ರದ್ದುಪಡಿಸಿದ್ದರು. ಧಾರವಾಡ ರಂಗಾಯಣಕ್ಕೆ ರಮೇಶ ಪರವಿ ನಾಯ್ಕರ್, ಶಿವಮೊಗ್ಗ ರಂಗಾಯಣಕ್ಕೆ ಸಂದೇಶ ಜವಳಿ, ಕಲಬುರ್ಗಿ ರಂಗಾಯಣಕ್ಕೆ ಪ್ರಭಾಕರ ಜೋಶಿ ಅವರನ್ನು ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT