ADVERTISEMENT

ಧ್ವನಿವರ್ಧಕ ಬಳಕೆ; ಶೀಘ್ರ ಕ್ರಮ– ಎಡಿಜಿಪಿ‌ ಅಲೋಕ್ ಕುಮಾರ

​ಪ್ರಜಾವಾಣಿ ವಾರ್ತೆ
Published 3 ಜೂನ್ 2022, 19:31 IST
Last Updated 3 ಜೂನ್ 2022, 19:31 IST
ಎಡಿಜಿಪಿ‌ ಅಲೋಕ್ ಕುಮಾರ
ಎಡಿಜಿಪಿ‌ ಅಲೋಕ್ ಕುಮಾರ   

ಹುಬ್ಬಳ್ಳಿ: ‘ಧ್ವನಿವರ್ಧಕ ಬಳಕೆ ನಿಯಂತ್ರಣಕ್ಕೆ ಸರ್ಕಾರ ಹೊರಡಿಸಿರುವ ಸುತ್ತೋಲೆಯಲ್ಲಿನ ಒಂದೆರಡು ಅಂಶಗಳಲ್ಲಿ ತಾಂತ್ರಿಕ ಸಮಸ್ಯೆಗಳಿವೆ. ಅವುಗಳನ್ನು ಸರಿಪಡಿಸಿ ಕೂಡಲೇ ಕ್ರಮ ಕೈಗೊಳ್ಳಲಾಗುವುದು’ ಎಂದು ಅಪರಾಧ ಮತ್ತು ಕಾನೂನು ಸುವ್ಯವಸ್ಥೆಯ ಎಡಿಜಿಪಿ ಅಲೋಕ್ ಕುಮಾರ ತಿಳಿಸಿದರು.

ಹುಬ್ಬಳ್ಳಿ –ಧಾರವಾಡ ಕಮಿಷನರೇಟ್'ನ ವಿವಿಧ ಪೊಲೀಸ್ ಠಾಣೆಗಳಿಗೆ ಶುಕ್ರವಾರ ಭೇಟಿ ನೀಡಿ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

‘ಧ್ವನಿವರ್ಧಕ ಬಳಕೆ ನಿಯಂತ್ರಣಕ್ಕೆ ಪೊಲೀಸ್ ಇಲಾಖೆ ಕಾರ್ಯನಿರತವಾಗಿದೆ. ತಾಂತ್ರಿಕ ಸಮಸ್ಯೆಗಳನ್ನು ಸರಿಪಡಿಸಿದ ನಂತರ ಒಂದೆರಡು ದಿನಗಳಲ್ಲಿ ಸುತ್ತೋಲೆಯ ನಿಯಮಗನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗುವುದು’ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.