ADVERTISEMENT

ಕಿಶೋರ್‌ ಚಂದ್ರ ನಿವೃತ್ತಿ; ಡಿಜಿಪಿಯಾಗಿ ಔರಾದಕರ

​ಪ್ರಜಾವಾಣಿ ವಾರ್ತೆ
Published 31 ಮೇ 2019, 20:00 IST
Last Updated 31 ಮೇ 2019, 20:00 IST
ಕಿಶೋರ್‌ ಚಂದ್ರ , ಔರಾದಕರ
ಕಿಶೋರ್‌ ಚಂದ್ರ , ಔರಾದಕರ   

ಬೆಂಗಳೂರು: ರಾಜ್ಯ ಪೊಲೀಸ್ ವಸತಿ ನಿಗಮದ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಿಜಿಪಿ ಎಚ್‌.ಸಿ. ಕಿಶೋರ್ ಚಂದ್ರ ಶುಕ್ರವಾರ ನಿವೃತ್ತರಾಗಿದ್ದು, ಅವರ ಸ್ಥಾನಕ್ಕೆ ರಾಘವೇಂದ್ರ ಔರಾದಕರ ಅವರನ್ನು ನೇಮಕ ಮಾಡಲಾಗಿದೆ.

ಪೊಲೀಸ್ ನೇಮಕಾತಿ ಹಾಗೂ ತರಬೇತಿ ವಿಭಾಗದ ಎಡಿಜಿಪಿ ಆಗಿದ್ದ ಔರಾದಕರ ಅವರಿಗೆ ಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶುಕ್ರವಾರ ಸಂಜೆಯಿಂದಲೇ ಜಾರಿಗೆ ಬರುವಂತೆ ಅವರಿಗೆ ರಾಜ್ಯ ಪೊಲೀಸ್ ವಸತಿ ನಿಗಮದ ಅಧ್ಯಕ್ಷ ಹುದ್ದೆ ನೀಡಲಾಗಿದೆ.

ಔರಾದಕರ ಅವರು 2020ರ ಜನವರಿಯಲ್ಲಿ ನಿವೃತ್ತರಾಗಲಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.