ADVERTISEMENT

ಬರೀ ಘೋಷಣೆಯೊಂದೇ ದೊಡ್ಡ ಸಾಧನೆಯಲ್ಲ: ಎಚ್‌ಡಿಕೆಗೆ ಬಿ.ಸಿ.ಪಾಟೀಲ್ ಟಾಂಗ್

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2020, 11:34 IST
Last Updated 7 ಮಾರ್ಚ್ 2020, 11:34 IST
ಬಿ.ಸಿ. ಪಾಟೀಲ್
ಬಿ.ಸಿ. ಪಾಟೀಲ್   

ಹಾವೇರಿ: ಎಚ್.ಡಿ. ಕುಮಾರಸ್ವಾಮಿ ಬರೀ ಸಾಲಮನ್ನಾ ಘೋಷಣೆ ಮಾಡಿಹೋದರೆ ಹೊರತು ಅದಕ್ಕಾಗಿ ಸೂಕ್ತ ರೂಪು ರೇಷೆ ಸಿದ್ಧಪಡಿಸಲಿಲ್ಲ. ಬಾಯಿಗೆ ಬಂದಂತೆ ಘೋಷಣೆ ಮಾಡಿ ಹೋಗುವುದು ದೊಡ್ಡ ವಿಷಯವೇನಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.

ಹಿರೇಕೆರೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಸರಿಯಾಗಿ ಯೋಜನೆ ರೂಪಿಸದೇ ಕುಮಾರಸ್ವಾಮಿ ಬಾಯಿಗೆ ಬಂದಂತೆ ಸಾಲಮನ್ನಾ ಘೋಷಣೆ ಮಾಡಿ ಹೋಗಿದ್ದಾರೆ. ಈಗ ರೈತರ ಸಾಲಮನ್ನಾ ಖೋತಾ ಆಗಿದೆ ಎಂದು ಕುಮಾರಸ್ವಾಮಿ ಅಪಪ್ರಚಾರ ಶುರು ಮಾಡಿದ್ದಾರೆ. ಯಾವುದೇ ರೈತರಿಗೂ ಸರ್ಕಾರ ಅನ್ಯಾಯ ಮಾಡುವುದಿಲ್ಲ ಎಂದರು.

ದಾಖಲೆಗಳನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದ್ದಾರೆ. ಘೋಷಣೆ ಮಾಡಿ ಹೋಗುವುದಕ್ಕಿಂತ ನುಡಿದಂತೆ ನಡೆದುಕೊಳ್ಳುವುದು ಮುಖ್ಯ ಎಂದು ಹೇಳಿದರು.

ADVERTISEMENT

ರೈತರ ಸಾಲಮನ್ನಾ ಮಾಡಲು ಹಂತ ಹಂತವಾಗಿ ದಾಖಲಾತಿ ಪರಿಶೀಲಿಸಲಾಗುತ್ತಿದೆ. ಎಚ್.ಡಿ.ಕುಮಾರಸ್ವಾಮಿ ಹಾಗೂ ಸಿದ್ದರಾಮಯ ವಿರೋಧ ಪಕ್ಷ ಸ್ಥಾನದಲ್ಲಿದ್ದಾರೆ. ಹೀಗಾಗಿ ವಿರೋಧ ಮಾಡುವುದು ಅವರ ಆ ಜನ್ಮ ಸಿದ್ಧ ಹಕ್ಕು ಎಂದು ತಿಳಿದುಕೊಂಡಿದ್ದಾರೆ. ಇರುವ ಇತಿಮಿತಿಯ ಅನುದಾನದಲ್ಲಿಯೇ ಯಡಿಯೂರಪ್ಪನವರು ಸಮತೋಲನದ ಬಜೆಟ್ ನೀಡಿದ್ದಾರೆ. ರೈತರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ‌ ಬಜೆಟ್‌ನಲ್ಲಿ ಕೃಷಿಗೆ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.