ADVERTISEMENT

ಈ ಬಾರಿ ಹೆಚ್ಚು ಯೂರಿಯಾ ರಸಗೊಬ್ಬರ ಪೂರೈಕೆ: ಕೃಷಿ ಸಚಿವ ಬಿ.ಸಿ.ಪಾಟೀಲ

​ಪ್ರಜಾವಾಣಿ ವಾರ್ತೆ
Published 8 ಜುಲೈ 2020, 12:05 IST
Last Updated 8 ಜುಲೈ 2020, 12:05 IST
ಬಿ.ಸಿ.ಪಾಟೀಲ
ಬಿ.ಸಿ.ಪಾಟೀಲ   

ಬೆಂಗಳೂರು:‘ರಾಜ್ಯದಲ್ಲಿ ಈ ಬಾರಿ ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರಕ್ಕೆ ಯಾವುದೇ ಕೊರತೆಯಿಲ್ಲ. ರೈತರು ಯಾವುದೇ ರೀತಿಯ ವದಂತಿಗಳಿಗೆ ಕಿವಿಗೊಡಬಾರದು’ ಎಂದು ಕೃಷಿ ಸಚಿವಬಿ.ಸಿ.ಪಾಟೀಲರೈತರಲ್ಲಿ ಮನವಿ ಮಾಡಿದ್ದಾರೆ.

ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳ ಜೊತೆ ಸಮಾಲೋಚನೆ ನಡೆಸಿ, ಅಗತ್ಯ ಪ್ರಮಾಣದಷ್ಟು ರಸಗೊಬ್ಬರವನ್ನು ಈಗಾಗಲೇ ರಾಜ್ಯಗಳಿಗೆ ಪೂರೈಸಿ, ದಾಸ್ತಾನು ಮಾಡಲಾಗಿದೆ. ಯಾವುದೇ ಕೊರತೆಯಾಗದಂತೆ ಕ್ರಮವಹಿಸಲಾಗಿದೆ ಎಂದು ಬುಧವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

2020-21 ನೇ ಸಾಲಿನ ಮುಂಗಾರು ಹಂಗಾಮಿನ ಏಪ್ರಿಲ್ 1 ರಿಂದ ಜುಲೈ 6 2020ರವರೆಗೆ ಯೂರಿಯಾ ರಸಗೊಬ್ಬರಕ್ಕೆ 4,98,000 ಮೆಟ್ರಿಕ್ ಟನ್ ಬೇಡಿಕೆ ಇದ್ದು, 4,35,700 ಮೆಟ್ರಿಕ್‌ ಟನ್ ಸರಬರಾಜಾಗಿದ್ದು 2,06,750 ಮೆ.ಟನ್ ದಾಸ್ತಾನು ಇದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಸುಮಾರು 1,55,468 ಮೆಟ್ರಿಕ್ ಟನ್ ಹೆಚ್ಚುವರಿ ಈ ಬಾರಿ ಯೂರಿಯಾ ರಸಗೊಬ್ಬರ ಪೂರೈಕೆಯಾಗಿದೆ. ಎಲ್ಲಾ ಜಿಲ್ಲೆಗಳಲ್ಲಿಯೂ ಸುಮಾರು2,06, 740 ಟನ್ ದಾಸ್ತಾನು ಇದೆ.

ADVERTISEMENT

ಮೇ ಮತ್ತು ಜೂನ್ ಅವಧಿಯಲ್ಲಿ ದೇಶದಾದ್ಯಂತ ನಿರೀಕ್ಷೆಗಿಂತ ಉತ್ತಮ ಮಳೆಯಾಗಿದ್ದರಿಂದ ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ ಬೇಡಿಕೆ ಪ್ರಮಾಣ ಗಣನೀಯವಾಗಿ ಹೆಚ್ಚಳವಾಗಿದೆ. ಹೆಚ್ಚುವರಿಯಾಗಿ ರಸಗೊಬ್ಬರಕ್ಕೆ ಯಾವುದೇ ಬೇಡಿಕೆ ಎದುರಾದರೂ ಇಲಾಖೆ ಪೂರೈಸಲಿದೆ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.