ADVERTISEMENT

ಆಗುಂಬೆ ಘಾಟಿ ಸಂಪರ್ಕ ಕಡಿತ

ತೀರ್ಥಹಳ್ಳಿ ಬಳಿ ರಸ್ತೆ ಜಲಾವೃತ

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2019, 19:46 IST
Last Updated 10 ಆಗಸ್ಟ್ 2019, 19:46 IST
   

ಉಡುಪಿ: ತೀರ್ಥಹಳ್ಳಿ ಸಮೀಪದ ಶಿವರಾಜಪುರ ಬಳಿ ತುಂಗಾ ನದಿಯ ನೀರು ರಸ್ತೆಯನ್ನು ಆವರಿಸಿದ್ದು, ಆಗುಂಬೆ ಘಾಟಿಯ ಸಂಪರ್ಕ ಕಡಿತಗೊಂಡಿದೆ.

ಪರಿಣಾಮ ತೀರ್ಥಹಳ್ಳಿಯಿಂದ ಆಗುಂಬೆ ಘಾಟಿ ಮಾರ್ಗವಾಗಿ ಹೆಬ್ರಿ ಉಡುಪಿಗೆ ಬರುವ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ನೀರಿನ ಹರಿವು ಕಡಿಮೆಯಾದ ಬಳಿಕ ಸಂಚಾರಕ್ಕೆ ಅನುಮತಿ ನೀಡಲಾಗುವುದು ಎಂದು ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಎಂಜಿನಿಯರ್ ನಾಗರಾಜ್ ನಾಯಕ್‌ ‘ಪ್ರಜಾವಾಣಿ’ಗೆ ಸ್ಪಷ್ಟಪಡಿಸಿದ್ದಾರೆ.

ಆಗುಂಬೆ ಘಾಟಿಯಲ್ಲಿ ಯಾವುದೇ ಸಮಸ್ಯೆ ಇಲ್ಲ. ಯಾವ ತಿರುವಿನಲ್ಲೂ ತಡೆಗೋಡೆ ಕುಸಿದಿಲ್ಲ. ವದಂತಿಗಳಿಗೆ ಕಿವಿಗೊಡಬೇಡಿ ಎಂದು ಅವರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.