ADVERTISEMENT

ಪುರಿ ಅರ್ಜಿ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2019, 20:15 IST
Last Updated 22 ಆಗಸ್ಟ್ 2019, 20:15 IST
   

ನವದೆಹಲಿ : ಅಗಸ್ಟಾ ವೆಸ್ಟ್‌ಲ್ಯಾಂಡ್‌ ಅತಿಗಣ್ಯರ ಹೆಲಿಕಾಪ್ಟರ್‌ ಖರೀದಿ ಹಗರಣಕ್ಕೆ ಸಂಬಂಧಿಸಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶರಣಾಗುವುದಾಗಿ ಉದ್ಯಮಿ ರತುಲ್‌ ಪುರಿ ದೆಹಲಿ ಕೋರ್ಟ್‌ಗೆ ಗುರುವಾರ ಅರ್ಜಿ ಸಲ್ಲಿಸಿದ್ದಾರೆ.

ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲನಾಥ್‌ ಅವರ ಸೋದರಳಿಯ ಪುರಿ ಅವರನ್ನು ಬ್ಯಾಂಕಿಗೆ ವಂಚನೆ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ (ಇ.ಡಿ) ಈಗಾಗಲೇ ಬಂಧಿಸಿದೆ.

ವಿಶೇಷ ನ್ಯಾಯಾಧೀಶ ಅರವಿಂದ್‌ ಕುಮಾರ್‌ ಅವರು ಪುರಿ ಸಲ್ಲಿಸಿದ ಅರ್ಜಿ ಸ್ವೀಕರಿಸಿ, ಶುಕ್ರವಾರ ವಿಚಾರಣೆ ನಡೆಸುವುದಾಗಿ ತಿಳಿಸಿದ್ದಾರೆ.

ADVERTISEMENT

ಪುರಿ ವಿರುದ್ಧ ಹೊರಡಿಸಿರುವ ಜಾಮೀನು ರಹಿತ ವಾರಂಟ್‌ ಅನ್ನು ರದ್ದುಪಡಿಸಲು ಸಲ್ಲಿಸಿದ್ದಅರ್ಜಿಯನ್ನು ಕೋರ್ಟ್‌ ಬುಧವಾರ ವಜಾಗೊಳಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.