ADVERTISEMENT

ಎಐಸಿಸಿ ಪ್ರಾದೇಶಿಕ ಸಂಯೋಜಕರಾಗಿ ರಮೇಶ್ ನೇಮಕ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2021, 19:53 IST
Last Updated 20 ಮಾರ್ಚ್ 2021, 19:53 IST
ಡಿ. ರಮೇಶ್
ಡಿ. ರಮೇಶ್   

ಬೆಂಗಳೂರು: ಎಐಸಿಸಿ ದಕ್ಷಿಣ ಭಾರತ ಪ್ರಾದೇಶಿಕ ಸಂಯೋಜಕರಾಗಿ ರಾಜ್ಯದ ಡಿ. ರಮೇಶ್ ಅವರನ್ನು ನೇಮಿಸಲಾಗಿದೆ.

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಯವರ ನಿರ್ದೇಶನದಂತೆ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ರಮೇಶ್‌ ಅವರನ್ನು ನೇಮಿಸಿ ದ್ದಾರೆ. 31 ವರ್ಷಗಳಿಂದ ಕೆಪಿಸಿಸಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ರಮೇಶ್‌, ಪಕ್ಷದ ಕಾರ್ಮಿಕ ಘಟಕದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದಾರೆ. ವಿವಿಧ ರಾಜ್ಯಗಳಲ್ಲಿ ಪಕ್ಷ ಸಂಘಟನೆಗಾಗಿ ಶ್ರಮಿಸಿದ್ದಾರೆ. ಪಕ್ಷದಲ್ಲಿನ ಅವರ ಸೇವೆ ಪರಿಗಣಿಸಿ ಪ್ರಾದೇಶಿಕ ಸಂಯೋಜಕರಾಗಿ ನೇಮಿಸಲಾಗಿದೆ ಎಂದು ಕಾಂಗ್ರೆಸ್ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT