ADVERTISEMENT

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ‘ಉಪನ್ಯಾಸ ಮಾಲೆ’

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2021, 14:56 IST
Last Updated 6 ಏಪ್ರಿಲ್ 2021, 14:56 IST

ಬೆಂಗಳೂರು: ಆಲ್‌ ಇಂಡಿಯಾ ಡೆಮಾಕ್ರಟಿಕ್‌ ಸ್ಟೂಡೆಂಟ್ಸ್‌ ಆರ್ಗನೈಸೇಷನ್‌ (ಎಐಡಿಎಸ್‌ಒ) ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ‘ಉಪನ್ಯಾಸ ಮಾಲೆ’ ಆರಂಭಿಸಿದೆ.

‘ಪರೀಕ್ಷೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಈ ಕಾರ್ಯಕ್ರಮ ಆರಂಭಿಸಿದ್ದೇವೆ. ಎಐಡಿಎಸ್‌ಒ ಕರ್ನಾಟಕದ ಫೇಸ್‌ಬುಕ್‌ ಪುಟ ಹಾಗೂ ಯೂಟ್ಯೂಬ್‌ ವಾಹಿನಿಯಲ್ಲಿ ಉಪನ್ಯಾಸ ಮಾಲಿಕೆ ನೇರ ಪ್ರಸಾರಗೊಳ್ಳಲಿದೆ. ಅನೇಕ ವಿಡಿಯೊಗಳನ್ನೂ ಹಾಕಲಿದ್ದೇವೆ. ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳಬೇಕು’ ಎಂದು ಎಐಡಿಎಸ್‌ಒ ರಾಜ್ಯ ಕಾರ್ಯದರ್ಶಿ ಅಜಯ್‌ ಕಾಮತ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಪರೀಕ್ಷೆಗಳು ಶುರುವಾದಾಗ ಅನೇಕ ಮಕ್ಕಳು ಮಾನಸಿಕ ಖಿನ್ನತೆಗೆ ಒಳಗಾಗುತ್ತಾರೆ. ಅನೇಕರು ಆತ್ಮಹತ್ಯೆಯನ್ನೂ ಮಾಡಿಕೊಳ್ಳುತ್ತಾರೆ. ಅಂತಹವರಿಗೆ ಧೈರ್ಯ ತುಂಬುವ ಸಲುವಾಗಿ ನಾವು ಈ ಹಿಂದೆ ‘ಆತ್ಮಹತ್ಯೆ ಉತ್ತರವಲ್ಲ’ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದ್ದೆವು’ ಎಂದು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.