ADVERTISEMENT

ಪೇಜಾವರ ಶ್ರೀಗಳ ಚಿಕಿತ್ಸೆಗೆ ದೆಹಲಿಯ ಏಮ್ಸ್‌ ವೈದ್ಯರ ತಂಡದ ನೆರವು

​ಪ್ರಜಾವಾಣಿ ವಾರ್ತೆ
Published 23 ಡಿಸೆಂಬರ್ 2019, 13:25 IST
Last Updated 23 ಡಿಸೆಂಬರ್ 2019, 13:25 IST
   

ಉಡುಪಿ: ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಪೇಜಾವರ ಶ್ರೀಗಳಿಗೆ ಚಿಕಿತ್ಸೆ ನೀಡಲು ದೆಹಲಿಯಏಮ್ಸ್ ತಜ್ಞ ವೈದ್ಯರ ನೆರವು ಪಡೆಯಲಾಗುತ್ತಿದೆ. ಶ್ರೀಗಳ ಆರೋಗ್ಯ ಸ್ಥಿರವಾಗಿದೆ ಎಂದು ಮಣಿಪಾಲದ ಕೆಎಂಸಿ ವೈದ್ಯರು ತಿಳಿಸಿದ್ದಾರೆ‌.

ಸೋಮವಾರ ಸಂಜೆ ಹೆಲ್ತ್ ಬಿಡುಗಡೆ ಮಾಡಿದ ಆಸ್ಪತ್ರೆ ವೈದ್ಯರು, ಬೆಂಗಳೂರಿನ ಮಣಿಪಾಲ ಆಸ್ಪತ್ರೆಯ ತಜ್ಞ ವೈದ್ಯರು ಸಹ ಮಣಿಪಾಲಕ್ಕೆ ಬಂದಿದ್ದು ಶ್ರೀಗಳ ಚಿಕಿತ್ಸೆಗೆ ಅಗತ್ಯ ನೆರವು ನೀಡುತ್ತಿದ್ದಾರೆ. ಸ್ವಾಮೀಜಿಯ ಆರೋಗ್ಯ ಸ್ಥಿತಿ ಗಂಭೀರವಾಗಿಯೇ ಇದೆ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದ್ದು, ವೆಂಟಿಲೇಟರ್ ವ್ಯವಸ್ಥೆ ಮಾಡಲಾಗಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ.

ಸೋಮವಾರ ಸಂಜೆ ಕೇಂದ್ರ ಸಚಿವೆ ಉಮಾಭಾರತಿ ಆಸ್ಪತ್ರೆಗೆ ಭೇಟಿನೀಡಿ ಶ್ರೀಗಳ ಆರೋಗ್ಯ ವಿಚಾರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.