ADVERTISEMENT

ಏಮ್ಸ್ ಅನ್ನು ರಾಮನಗರಕ್ಕೆ ತೆಗೆದುಕೊಂಡು ಹೋಗಲು ಸಿಎಂ ಪ್ರಯತ್ನ: ಪ್ರಹ್ಲಾದ ಜೋಶಿ

​ಪ್ರಜಾವಾಣಿ ವಾರ್ತೆ
Published 25 ಡಿಸೆಂಬರ್ 2018, 12:22 IST
Last Updated 25 ಡಿಸೆಂಬರ್ 2018, 12:22 IST
   

ಹುಬ್ಬಳ್ಳಿ: ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆಯನ್ನು (ಏಮ್ಸ್‌) ಉತ್ತರ ಕರ್ನಾಟದಲ್ಲಿಯೇ ಆರಂಭಿಸಬೇಕು ಎಂದು ಶಾಸಕ ಜಗದೀಶ ಶೆಟ್ಟರ್ ಹಾಗೂ ಸಂಸದ ಪ್ರಹ್ಲಾದ ಜೋಶಿ ಒತ್ತಾಯಿಸಿದರು.

ಬಾಲಾಜಿ ಹಾರ್ಟ್‌ಕೇರ್ ಸೆಂಟರ್ ಉದ್ಘಾಟನಾ ಸಮಾರಂಭದಲ್ಲಿ ಮಂಗಳವಾರ ಮಾತನಾಡಿದ ಜೋಶಿ, ‘ಕೇಂದ್ರ ಸರ್ಕಾರ ರಾಜ್ಯಕ್ಕೆ ಮಂಜೂರು ಮಾಡಿರುವ ಏಮ್ಸ್‌ ಅನ್ನು ರಾಮನಗರದಲ್ಲಿ ಆರಂಭಿಸಿ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಪತ್ರ ಬರೆದಿದ್ದಾರೆ. ಆದರೆ ಅದನ್ನು ಉತ್ತರ ಕರ್ನಾಟಕದಲ್ಲಿಯೇ ಆರಂಭಿಸಬೇಕು ಎಂದು ಸಂಸದರ ಸಭೆಯಲ್ಲಿಯೂ ನಾನು ಅಭಿಪ್ರಾಯ ವ್ಯಕ್ತಪಡಿಸಿದ್ದೆ’ ಎಂದರು.

‘ಏಮ್ಸ್ ಅನ್ನು ರಾಮನಗರಕ್ಕೆ ತೆಗೆದುಕೊಂಡು ಹೋಗಲು ಕುಮಾರಸ್ವಾಮಿ ಪ್ರಯತ್ನಿಸುತ್ತಿದ್ದಾರೆ, ಇದು ಅವರ ದೃಷ್ಟಿಕೋನವನ್ನು ತಿಳಿಸುತ್ತದೆ. ಆದರೆ ಅದನ್ನು ಈ ಭಾಗದಲ್ಲಿಯೇ ಆರಂಭಿಸುವಂತೆ ನಾವು ಒತ್ತಡ ಹೇರುತ್ತೇವೆ’ ಎಂದು ಶೆಟ್ಟರ್ ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.