ADVERTISEMENT

ಪೊನ್ನಂಪೇಟೆ ಬಳಿ ಹಳ್ಳಕ್ಕೆ ಉರುಳಿದ ಐರಾವತ ಬಸ್‌

​ಪ್ರಜಾವಾಣಿ ವಾರ್ತೆ
Published 10 ಜನವರಿ 2020, 3:05 IST
Last Updated 10 ಜನವರಿ 2020, 3:05 IST
   

ಪೊನ್ನಂಪೇಟೆ: ಮೈಸೂರಿನಿಂದ ಗೋಣಿಕೊಪ್ಪಲು ಮಾರ್ಗವಾಗಿ ಕೇರಳಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿಯ ಐರಾವತ ಬಸ್ ಶುಕ್ರವಾರ ಮುಂಜಾನೆ ರಸ್ತೆ ಬದಿಯ ಹಳ್ಳಕ್ಕೆಉರುಳಿದೆ.

ಮುಂಜಾನೆ ಸಂಭವಿಸಿದ ಈ ಘಟನೆಯಲ್ಲಿಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಿಲ್ಲ. ಸ್ಥಳೀಯರು ಬಸ್‌ನಿಂದ ಪ್ರಯಾಣಿಕರನ್ನು ಸುರಕ್ಷಿತವಾಗಿ ಇಳಿಸಿ ಬೇರೊಂದು ವಾಹನದಲ್ಲಿ ಕೇರಳಕ್ಕೆ ಕಳುಹಿಸಿದ್ದಾರೆ.

ಬೆಳಗ್ಗಿನ ಜಾವ ದಟ್ಟವಾಗಿ ಮಂಜು ಕವಿದಿತ್ತು.‌ ಸರಿಯಾಗಿ ರಸ್ತೆಯೂ ಕಾಣಿಸುತ್ತಿರಲಿಲ್ಲ. ರಸ್ತೆಯೂ ಕಿರಿದಾಗಿದ್ದು ಚಾಲಕನ‌ ನಿಯಂತ್ರಣ ತಪ್ಪಿ ಬಸ್ ಉರುಳಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.