ರಾಮನಗರ: ಜಿಲ್ಲೆಯಾದ್ಯಂತ ಗುರುವಾರ ಪ್ರತಿಭಟನೆಗಳು ನಡೆಯಲಿರುವ ಹಿನ್ನೆಲೆಯಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿ ಹಾಗೂ ಬೆಂಗಳೂರು-ಕನಕಪುರ ಹೆದ್ದಾರಿಯಲ್ಲಿ ಪ್ರಯಾಣ ಕೈಗೊಳ್ಳದಂತೆ ರಾಮನಗರ ಪೊಲೀಸರು ಮನವಿ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪೊಲೀಸರು ಈ ಎರಡೂ ಮಾರ್ಗಗಳನ್ನು ಬಿಟ್ಟು ಪರ್ಯಾಯ ಮಾರ್ಗದಲ್ಲಿ ಚಲಿಸುವಂತೆ ಕೋರಿದ್ದಾರೆ.
ಕನಕಪುರದಲ್ಲಿ ಐಪಿಎಸ್ ಪಡೆ: ಕನಕಪುರದಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಮೂವರು ಐಪಿಎಸ್ ಅಧಿಕಾರಿಗಳನ್ನು ನಿಯೋಜಿಸಿದೆ.
ಈ ಹಿಂದೆ ರಾಮನಗರ ಎಸ್ಪಿ ಆಗಿ ಕಾರ್ಯ ನಿರ್ವಹಿಸಿದ್ದ ಅನುಪಮ್ ಅಗರ್ ವಾಲ್ ಅವರನ್ನು ಬಂದೋಬಸ್ತ್ ಗೆ ನಿಯೋಜಿಸಲಾಗಿದೆ. ಇವರೊಟ್ಟಿಗೆ ಚಿಕ್ಕಬಳ್ಳಾಪುರ ಎಸ್ಪಿ ಸಂತೋಷ್ ಬಾಬು, ಮತ್ತೊಬ್ಬ ಐಪಿಎಸ್ ಅಧಿಕಾರಿ ಅಭಿನವ್ ಖರೆ ಅವರನ್ನು ನಿಯೋಜಿಸಿದೆ ಎಂದು ತಿಳಿದುಬಂದಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.