ADVERTISEMENT

ಅಂಬರೀಷ್ ಅಂತ್ಯಕ್ರಿಯೆ: ಕಂಠೀರವ ಸ್ಟುಡಿಯೊದಲ್ಲಿ ಸಕಲ ಸಿದ್ಧತೆ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2018, 6:22 IST
Last Updated 26 ನವೆಂಬರ್ 2018, 6:22 IST
   

ಬೆಂಗಳೂರು: ಕಂಠೀರವ ಸ್ಟುಡಿಯೊದಲ್ಲಿರುವ ವರನಟ ಡಾ.ರಾಜ್ ಕುಮಾರ್ ಅವರ ಸಮಾಧಿಯ ಮುಂಭಾಗದ ಸ್ಥಳದಲ್ಲಿ ರೆಬೆಲ್ ಸ್ಟಾರ್ ಅಂಬರೀಷ್ ಅಂತ್ಯಕ್ರಿಯೆಗೆ ಸಿದ್ಧತೆ ನಡೆಸಲಾಗಿದೆ.

ಸ್ಟುಡಿಯೊದ ಸುತ್ತಲೂ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ವಿಐಪಿಗಳು, ಚಿತ್ರರಂಗದ ಗಣ್ಯರು, ರಾಜಕಾರಣಿಗಳು, ಕುಟುಂಬದ ಸದಸ್ಯರು ಕುಳಿತು ಕೊಳ್ಳಲು ವಿಶೇಷ ಆಸನ ವ್ಯವಸ್ಥೆ ಮಾಡಲಾಗಿದೆ.

ಒಳಪ್ರವೇಶಿಸಲು ಸ್ಟುಡಿಯೊ ಮುಂಭಾಗದಿಂದ ಅವಕಾಶ ಕಲ್ಪಿಸಲಾಗಿದೆ. ಪ್ರವೇಶದ್ವಾರದ ಮುಂಭಾಗ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆದಿದ್ದಾರೆ. ಅವರಿಗೂ ಪ್ರತ್ಯೇಕ ಆಸನ ವ್ಯವಸ್ಥೆ ಮಾಡಲಾಗಿದೆ.

ADVERTISEMENT
ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಕಚೇರಿ ಎದುರು ಅಂಬರೀಷ್ ಅವರ ಭಾವಚಿತ್ರ

ಸ್ಥಳ ಪರಿಶೀಲಿಸಿದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ

ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಸ್ಥಳ ಪರಿಶೀಲನೆ ಮಾಡಿದರು. 'ಅಂತಿಮ‌ ದರ್ಶನಕ್ಕೆ ಆಗಮಿಸುವ ಸಾರ್ವಜನಿಕರು ಹಾಗೂ ಗಣ್ಯರಿಗೆ ಪ್ರತ್ಯೇಕ ಸಾಲುಗಳ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ಶಾಂತಿಯಿಂದ ಅವರಿಗೆ ಗೌರವ ಸಲ್ಲಿಸುವಂತೆ ಮನವಿ‌ ಮಾಡುತ್ತೇನೆ. ಅವರನ್ನು ಅತ್ಯಂತ ಶಾಂತಿಯುತವಾಗಿ ಕಳುಹಿಸಿಕೊಡಲು ಸಾರ್ವಜನಿಕರು ಸಹಕರಿಸಬೇಕು'‌ ಎಂದು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.