ADVERTISEMENT

ಅಂಬರೀಷ್‌ ಹುಟ್ಟಹಬ್ಬಕ್ಕೆ ಸಿಎಂ ಎಚ್‌ಡಿಕೆಯಿಂದ ಸ್ಮರಣೆಯ ಟ್ವೀಟ್‌

​ಪ್ರಜಾವಾಣಿ ವಾರ್ತೆ
Published 29 ಮೇ 2019, 13:32 IST
Last Updated 29 ಮೇ 2019, 13:32 IST
   

ಬೆಂಗಳೂರು: ರೆಬಲ್‌ ಸ್ಟಾರ್‌ ಅಂಬರೀಷ್‌ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರು ಟ್ವೀಟ್‌ ಮಾಡಿ ಸ್ಮರಿಸಿದ್ದಾರೆ.

‘ಅಂಬರೀಷ್ ಹಾಗೂ ನನ್ನ ಸ್ನೇಹ ಮರೆಯಲಾಗದಂತಹದ್ದು. ಸದಾ ಜನರೊಂದಿಗೆ ಬೆರೆತ, ಸಮುದಾಯದ ಏಳಿಗೆಯ ಬಗ್ಗೆ ಚಿಂತಿಸಿದ ಗೆಳೆಯನ ಜನ್ಮ ದಿನ ಇಂದು. ಅಂಬರೀಷ್ ಅವರ ಉದಾತ್ತ ಮನಸ್ಸು ಎಲ್ಲರಿಗೂ ದಕ್ಕಲಿ ಎಂದು ಹಾರೈಸುತ್ತೇನೆ,’ ಎಂದು ಅವರು ತಮ್ಮ ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ.

ಇಂದು ಅಂಬರೀಷ್‌ ಅವರ 67ನೇ ಹುಟ್ಟು ಹಬ್ಬ. ಈ ಹಿನ್ನೆಲೆಯಲ್ಲಿ ಚಿತ್ರರಂಗದ ಪ್ರಮುಖರು, ರಾಜಕಾರಣಿಗಳು, ಅಭಿಮಾನಿಗಳು ಅಂಬರೀಷ್‌ ಅವರನ್ನು ಸ್ಮರಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.