ADVERTISEMENT

ಪ್ರೊ. ಶಿವಪ್ರಕಾಶ ಅವರಿಗೆ ಅಂಬಿಕಾತನಯದತ್ತ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 19 ಜನವರಿ 2021, 13:26 IST
Last Updated 19 ಜನವರಿ 2021, 13:26 IST
ಪ್ರೊ. ಎಚ್.ಎಸ್.ಶಿವಪ್ರಕಾಶ
ಪ್ರೊ. ಎಚ್.ಎಸ್.ಶಿವಪ್ರಕಾಶ   

ಧಾರವಾಡ: ಡಾ. ದ.ರಾ.ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ನೀಡುವ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿಯು ಪ್ರೊ. ಎಚ್‌.ಎಸ್.ಶಿವಪ್ರಕಾಶ ಅವರಿಗೆ ಲಭಿಸಿದೆ.

ಪ್ರಶಸ್ತಿ₹1ಲಕ್ಷ ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.ಪ್ರಶಸ್ತಿ ಆಯ್ಕೆಯಲ್ಲಿ ಡಾ. ಗುರುಪಾದ ಮರೆಗುದ್ದಿ ಅವರ ಅಧ್ಯಕ್ಷತೆಯ ಸಮಿತಿಯಲ್ಲಿ ಪ್ರೊ. ಶಿವಾನಂದ ಕೆಳಗಿನಮನಿ, ಡಾ. ತಾರಿಣಿ ಶುಭದಾಯಿನಿ ಇದ್ದರು.

ಡಾ. ದ.ರಾ.ಬೇಂದ್ರೆ ಅವರ 125ನೇ ಜನ್ಮದಿಚಾರಣೆ ಸಂದರ್ಭದಲ್ಲಿ ಜ. 31ರಂದು ನಗರದ ಬೇಂದ್ರೆ ಭವನದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆಎಂದು ಟ್ರಸ್ಟ್ ಅಧ್ಯಕ್ಷ ಡಾ. ಡಿ.ಎಂ.ಹಿರೇಮಠ ಮಂಗಳವಾರ ಇಲ್ಲಿ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.