ADVERTISEMENT

ಅಭಿಮಾನಿಗಳ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2018, 7:52 IST
Last Updated 26 ನವೆಂಬರ್ 2018, 7:52 IST
   

ಬೆಂಗಳೂರು: ಅಂಬರೀಷ್ ಅವರ ಅಂತ್ಯಕ್ರಿಯೆ ವೀಕ್ಷಿಸಲು ಬಂದಿರುವ ಸಾವಿರಾರು ಅಭಿಮಾನಿಗಳ ನಿಯಂತ್ರಣಕ್ಕೆ ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

ಕಂಠೀರವ ಸ್ಟುಡಿಯೊದ ಆಡಳಿತ ಕಚೇರಿಯ ಮುಂಭಾಗದಿಂದ ಅಂತ್ಯಕ್ರಿಯೆ ನಡೆಯುವ ಸ್ಥಳಕ್ಕೆ ಗಣ್ಯರು, ನಟ, ನಟಿಯರು ತೆರಳಲು ಅವಕಾಶ ಕಲ್ಪಿಸಲಾಗಿದೆ. ಈ ಮಾರ್ಗದಲ್ಲಿಯೇ ಅಭಿಮಾನಿಗಳು ಮತ್ತು ಸಾರ್ವಜನಿಕರಿಗೆ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಈ ಮಾರ್ಗವಾಗಿ ಚಿತ್ರರಂಗದ ನಟ, ನಟಿಯರು ತೆರಳುವಾಗ ಅಭಿಮಾನಿಗಳು ಜೈಕಾರ ಮೊಳಗಿಸುತ್ತಿದ್ದಾರೆ.

ನಟರಾದ ಶಿವರಾಜ್ ಕುಮಾರ್, ದುನಿಯಾ ವಿಜಯ್, ರಂಗಾಯಣ ರಘು, ಜೈಜಗದೀಶ್, ಚೇತನ್, ನಿರ್ದೇಶಕ ಎಸ್.ನಾರಾಯಣ್ ಸೇರಿದಂತೆ ಹಲವು‌ ಕಲಾವಿದರು ಈಗಾಗಲೇ ಬಂದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.