ADVERTISEMENT

ಯಡಿಯೂರಪ್ಪ ಸೇವೆಯನ್ನು ಶ್ಲಾಘಿಸಿದ ಅಮಿತ್ ಶಾ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 28 ಜುಲೈ 2021, 8:37 IST
Last Updated 28 ಜುಲೈ 2021, 8:37 IST
ಕೇಂದ್ರ ಗೃಹ ಸಚಿವ ಅಮಿತ್ ಶಾ
ಕೇಂದ್ರ ಗೃಹ ಸಚಿವ ಅಮಿತ್ ಶಾ    

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಅವರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆಗಳು. ಪ್ರಧಾನಿ ನರೇಂದ್ರ ಮೋದಿಯವರ ಮಾರ್ಗದರ್ಶನದಲ್ಲಿ ಅವರು ತಮ್ಮ ಬುದ್ಧಿವಂತಿಕೆ ಮತ್ತು ಅನುಭವವನ್ನು ಬಳಸಿಕೊಂಡು ರಾಜ್ಯದ ಬಡವರಿಗೆ ಮತ್ತು ರೈತರಿಗೆ ಸೇವೆ ಸಲ್ಲಿಸುವ ಬಿಜೆಪಿಯ ಸಂಕಲ್ಪವನ್ನು ಮತ್ತಷ್ಟು ಗಟ್ಟಿಗೊಳಿಸಲಿದ್ದಾರೆ ಎಂದು ನಂಬಿರುವುದಾಗಿ ಹೇಳಿದ್ದಾರೆ.

ಇದೇವೇಳೆ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಸೇವೆಯನ್ನೂ ಅಮಿತ್ ಶಾ ಶ್ಲಾಘಿಸಿದ್ದಾರೆ.

ADVERTISEMENT

ಬಿ.ಎಸ್‌. ಯಡಿಯೂರಪ್ಪನವರು ಬಿಜೆಪಿ ಪಕ್ಷ ಮತ್ತು ಕರ್ನಾಟಕದ ಜನರಿಗೆ ಅತ್ಯಂತ ಭಕ್ತಿಯಿಂದ ಸೇವೆ ಸಲ್ಲಿಸಿದ್ದಾರೆ. ಕರ್ನಾಟಕದಲ್ಲಿ ತಳಮಟ್ಟದಲ್ಲಿ ಬಿಜೆಪಿಯನ್ನು ಬಲಪಡಿಸುವ ನಿಟ್ಟಿನಲ್ಲಿ ಅವರ ಕೊಡುಗೆ ಮತ್ತು ಕಠಿಣ ಪರಿಶ್ರಮ ನಿಜಕ್ಕೂ ಸ್ಫೂರ್ತಿದಾಯಕವಾದದ್ದು. ಪಕ್ಷ ಮತ್ತು ಸರ್ಕಾರಕ್ಕೆ ಅವರ ಮಾರ್ಗದರ್ಶನದ ಅಗತ್ಯವಿದೆ. ಅವರು ಅದನ್ನು ಮುಂದುವರಿಸುತ್ತಾರೆ ಎಂದು ನಂಬಿರುವುದಾಗಿ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.