ADVERTISEMENT

ಚರ್ಚೆಗೆ ಗ್ರಾಸವಾದ ಮಾಮನಿ ಗೈರು

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2021, 20:01 IST
Last Updated 16 ಸೆಪ್ಟೆಂಬರ್ 2021, 20:01 IST

ಬೆಂಗಳೂರು: ಸಚಿವ ಸ್ಥಾನ ಸಿಗದೇ ಮುನಿಸಿಕೊಂಡಿರುವ ವಿಧಾನಸಭೆಯ ಉಪಾಧ್ಯಕ್ಷ ಆನಂದ ಮಾಮನಿ ಅವರು ಈ ಅಧಿವೇಶನದಲ್ಲಿ ಈವರೆಗೆ ಕಲಾಪಕ್ಕೆ ಹಾಜರಾಗದೇ ಇರುವುದು ಚರ್ಚೆಗೆ ಗ್ರಾಸವಾಗಿದೆ.

ಇದೇ 13 ರಿಂದ ಅಧಿವೇಶನ ಆರಂಭವಾಗಿದ್ದು, ಒಂದೂ ದಿನ ಅವರು ಕಲಾಪಕ್ಕೆ ಹಾಜರಾಗಿಲ್ಲ. ಇದರಿಂದ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಮೇಲೆ ಕಲಾಪದ ಕಾರ್ಯಭಾರದ ಒತ್ತಡ ಅಧಿಕವಾಗಿದೆ. ಸಭಾಧ್ಯಕ್ಷ ಕಾರ್ಯನಿರ್ವಹಣೆಯ ಪ್ಯಾನಲ್‌ನ ಇತರ ಸದಸ್ಯರನ್ನು ಬಳಸಿ ಕೊಂಡು ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಮೂಲಗಳು ಹೇಳಿವೆ. ಆನಂದ
ಮಾಮನಿ, ಸದನಕ್ಕೆ ಗೈರಾಗುವ ಮೂಲಕ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ ಅವರು ಪ್ರತಿಕ್ರಿಯೆಗೆ ಲಭ್ಯರಾಗಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT