ಹೊಸಪೇಟೆ: ‘ಸಮಾಜ ಸೇವೆಯಿಂದಾಗಿ ಮಗನ ಮದುವೆ ಶಾಸ್ತ್ರದ ಯಾವ ಕಾರ್ಯಕ್ರಮಗಳಲ್ಲಿಯೂ ಭಾಗವಹಿಸಲು ಆಗುತ್ತಿಲ್ಲ’ ಎಂದು ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಬುಧವಾರ ಭಾವುಕರಾಗಿ ಕಣ್ಣೀರು ಹಾಕಿದರು.
ವಿಜಯನಗರ ಕ್ಷೇತ್ರದ ಉಪ ಚುನಾವಣೆಗಾಗಿ, ತಾಲ್ಲೂಕಿನ ಹೊಸೂರಿನಲ್ಲಿ ಪ್ರಚಾರ ಭಾಷಣ ಮಾಡಿದ ಅವರು, ‘ಮಗನ ಮದುವೆ ಮೊದಲೇ ನಿಶ್ಚಯವಾಗಿತ್ತು. ಚುನಾವಣೆಯಿಂದಾಗಿ, ಮದುವೆಯ ಯಾವ ಶಾಸ್ತ್ರಗಳಲ್ಲಿಯೂ ಸಂಪೂರ್ಣವಾಗಿ ಪಾಲ್ಗೊಳ್ಳಲು, ಸಂಭ್ರಮಿಸಲು ಆಗುತ್ತಿಲ್ಲ. ದೇವರ ಮೇಲೆ ಭಾರ ಹಾಕಿ, ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದೇನೆ’ ಎಂದು ಕಣ್ಣೀರಾದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.